alex Certify ಮಹಾದಾಯಿ ನಮ್ಮದೇ ಎಂದು ಹೇಳಿದ ಗೋವಾ ಸಿಎಂಗೆ ಏಕವಚನದಲ್ಲೇ ಈಶ್ವರಪ್ಪ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾದಾಯಿ ನಮ್ಮದೇ ಎಂದು ಹೇಳಿದ ಗೋವಾ ಸಿಎಂಗೆ ಏಕವಚನದಲ್ಲೇ ಈಶ್ವರಪ್ಪ ತಿರುಗೇಟು

ಕಾರವಾರ: ಮಹಾದಾಯಿ ವಿಚಾರವಾಗಿ ಹೇಳಿಕೆ ನೀಡಿದ ಗೋವಾ ಮುಖ್ಯಮಂತ್ರಿಗೆ ಏಕವಚನದಲ್ಲೇ ಸಚಿವ ಕೆ.ಎಸ್. ಈಶ್ವರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ.

ಯಾರೋ ಏನು ಹೇಳುತ್ತಾರೆ ಅಂತ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಅವನ್ಯಾರೋ ಒಬ್ಬ ಹೇಳಿದರೆ ಅದೆಲ್ಲಾ ಆಗಲ್ಲ. ಪ್ರಚಾರಕ್ಕಾಗಿ ಹೀಗೆಲ್ಲ ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಮಾತನಾಡಿದ ಈಶ್ವರಪ್ಪ, ಮಹಾದಾಯಿ ವಿಚಾರದಲ್ಲಿ ನ್ಯಾಯಮಂಡಳಿ ತೀರ್ಪಿಗೆ ಬದ್ಧವಾಗಿದ್ದೇವೆ. ಇವತ್ತು ಗೋವಾ ಮುಖ್ಯಮಂತ್ರಿ, ನಾಳೆ ಮಹಾರಾಷ್ಟ್ರ ಮುಖ್ಯಮಂತ್ರಿ ಏನೇನೋ ಹೇಳುತ್ತಾರೆ. ಈ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿ ಕಾಲಹರಣ ಮಾಡುವುದಿಲ್ಲ. ಸಂವಿಧಾನಬದ್ಧವಾದ ತೀರ್ಮಾನಕ್ಕೆ ನಾವು ತಲೆಬಾಗುತ್ತೇವೆ. ಸುಪ್ರೀಂ ಕೋರ್ಟ್ ನೀಡುವ ತೀರ್ಮಾನಕ್ಕೆ ನಾವು ತಲೆಬಾಗುತ್ತೇವೆ ಎಂದು ತಿಳಿಸಿದ್ದಾರೆ. ಗಡಿ ವಿಚಾರದಲ್ಲಿಯೂ ಮಹಾಜನ್ ವರದಿಗೆ ಬದ್ಧವಾಗಿರುತ್ತೇವೆ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...