alex Certify ರಾಜ್ಯದ ಜನತೆಗೆ ಸಿಹಿ ಸುದ್ದಿ: ಉಚಿತ ಲಸಿಕೆ ನೀಡಲು ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಸಿಹಿ ಸುದ್ದಿ: ಉಚಿತ ಲಸಿಕೆ ನೀಡಲು ಚರ್ಚೆ

ಶಿವಮೊಗ್ಗ: ದೇಶಾದ್ಯಂತ ಕೊರೋನಾ ವಾರಿಯರ್ಸ್ ಗೆ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಿದೆ. ನಿನ್ನೆ ಶಿವಮೊಗ್ಗದಲ್ಲಿ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ ಉಚಿತ ಲಸಿಕೆ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ದೇಶದಲ್ಲಿಯೇ ತಯಾರಿಸಿದ ಲಸಿಕೆಗಳನ್ನು ಬೇರೆ ದೇಶಗಳಿಗಿಂತ ಕಡಿಮೆ ದರದಲ್ಲಿ ಜನಸಾಮಾನ್ಯರಿಗೆ ದೊರಕುವಂತೆ ಮಾಡಲಾಗಿದೆ. ಉಚಿತವಾಗಿ ಜನರಿಗೆ ಲಸಿಕೆ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

ಬೇರೆ ದೇಶಗಳ ಲಸಿಕೆಯನ್ನು ಮೈನಸ್ ಡಿಗ್ರಿಯಲ್ಲಿ ಸಂಗ್ರಹಿಸಿಡುವ ಅನಿವಾರ್ಯತೆ ಇದೆ. ಆದರೆ, ಭಾರತದ ಲಸಿಕೆಯನ್ನು ಸುಲಭವಾಗಿ ದಾಸ್ತಾನು ಮಾಡಬಹುದು. ಎಲ್ಲರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ವಿಜ್ಞಾನಿಗಳು ಯಶಸ್ವಿಯಾಗಿ ಲಸಿಕೆ ಸಿದ್ಧಪಡಿಸಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಜನಸಾಮಾನ್ಯರಿಗೆ ಉಚಿತವಾಗಿ ಲಸಿಕೆ ನೀಡುವ ಕುರಿತು ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...