alex Certify ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ ಕೆ.ಎಸ್.ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ ಕೆ.ಎಸ್.ಈಶ್ವರಪ್ಪ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೂ ಮುನ್ನ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸಕ್ರಿಯರಾಗಿದ್ದು, ತಮ್ಮ ಪುತ್ರನಿಗೆ ಲೋಕಸಭಾ ಟಿಕೆಟ್ ಕೊಡಿಸಲು ಯತ್ನ ನಡೆಸಿದ್ದಾರೆ.

ಹಾವೇರಿ ಲೋಕಸಭಾ ಟಿಕೆಟ್ ತಮ್ಮ ಮಗ ಕಾಂತೇಶ್ ಗೆ ನೀಡಬೇಕು ಎಂದು ಈ ಹಿಂದೆ ಈಶ್ವರಪ್ಪ ಬಹಿರಂಗವಾಗಿ ಒತ್ತಾಯಿಸಿದ್ದರು. ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿರುವ ಕೆ.ಎಸ್.ಈಶ್ವರಪ್ಪ ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ್ದಾರೆ.

ಹುಬ್ಬಳ್ಳಿಯ ಮಯೂರಾ ಎಸ್ಟೇಟ್ ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭೇಟಿ ನೀಡಿದ ಈಶ್ವರಪ್ಪ ಕೆಲ ಕಾಲ ಚರ್ಚೆ ನಡೆಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಏನೂ ವಿಶೇಷವಿಲ್ಲ. ಈಶ್ವರಪ್ಪ ಬಂದರೆ ಸುದ್ದಿಯಾಗುತ್ತೆ… ಜೋಶಿ ಹಾಗೂ ನಾನು ಇಬ್ಬರೂ ಒಂದೇ ಪಕ್ಷದವರು ಹಾಗಾಗಿ ಭೇಟಿಯಾಗಿದ್ದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...