alex Certify ಕಲಬುರಗಿ ಸಿಮೆಂಟ್ ಫ್ಯಾಕ್ಟರಿಯಲ್ಲಿ ಮತ್ತೊಬ್ಬ ಕಾರ್ಮಿಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲಬುರಗಿ ಸಿಮೆಂಟ್ ಫ್ಯಾಕ್ಟರಿಯಲ್ಲಿ ಮತ್ತೊಬ್ಬ ಕಾರ್ಮಿಕ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಸೇಡಂನ ಶ್ರೀ ಸಿಮೆಂಟ್ ಫ್ಯಾಕ್ಟರಿಯಲ್ಲಿ ಭಾನುವಾರ ಮತ್ತೊಬ್ಬ ಕಾರ್ಮಿಕ ಸಾವನ್ನಪ್ಪಿದ್ದಾರೆ. ಜಾರ್ಖಂಡ್ ಮೂಲದ ರಾಜಕುಮಾರ್(26) ಮೃತಪಟ್ಟ ಕಾರ್ಮಿಕ ಎಂದು ಹೇಳಲಾಗಿದೆ.

ಫ್ಯಾಕ್ಟರಿಯಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳದ ಕಾರಣ ರಾಜಕುಮಾರ್ ಸಾವು ಸಂಭವಿಸಿದೆ. ಕೆಲವು ದಿನಗಳ ಹಿಂದೆಯಷ್ಟೇ ಬೆನಕನಹಳ್ಳಿ ನಿವಾಸಿ ಇಂದ್ರಕುಮಾರ್ ಸುರಕ್ಷತಾ ಕ್ರಮವಿಲ್ಲದ ಕಾರಣ ಮೃತಪಟ್ಟಿದ್ದರು. ಎರಡು ತಿಂಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಸೇಡಂನವರೇ ಸಾವನ್ನಪ್ಪಿದ್ದಾರೆ. ಹೀಗಿದ್ದರೂ ಸಚಿವರು ಭೇಟಿ ನೀಡಿಲ್ಲ. ಅಧಿಕಾರಿಗಳು ಕೂಡ ನಿರ್ಲಕ್ಷ್ಯ ವಹಿಸಿದ್ದಾರೆ. ಸುರಕ್ಷತಾ ಕ್ರಮ ಕೈಗೊಳ್ಳದ ಬಗ್ಗೆ ಫ್ಯಾಕ್ಟರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ಸೇಡಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಗೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...