ಕಲಬುರ್ಗಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪೇಸಿಎಂ ಪೋಸ್ಟರ್ ಹಾಗೂ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಪೋಸ್ಟರ್ ವಿವಾದಗಳು ತಾರಕಕ್ಕೇರಿತ್ತು. ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪ್ರಿಯಾಂಕ್ ಖರ್ಗೆಯವರನ್ನು ಶೂಟ್ ಮಾಡುತ್ತೇನೆ ಎಂದು ಬೆದರಿಕೆಯೊಡ್ದಿದ್ದರು. ರಾಠೋಡ್ ವಿರುದ್ಧ ದೂರು ದಾಖಲಾಗಿತ್ತು.
ಇದೀಗ ಮಣಿಕಂಠ ರಾಠೋಡ್ ಅವರನ್ನು ಹೈದರಾಬಾದ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಳಿಕ ಸ್ಟೇಷನ್ ಬೇಲ್ ಸಿಕ್ಕ ಹಿನ್ನೆಲೆಯಲ್ಲಿ ಮಣಿಕಂಠ ರಾಠೋಡ್ ಬಿಡುಗಡೆಗೊಂಡಿದ್ದಾರೆ.
ನಾವು ದೇಶ ಕಾಯುವ ಯೋಧರಿದ್ದಂತೆ. ಪ್ರಿಯಾಂಕ್ ಖರ್ಗೆ ನಮ್ಮ ಮೇಲೆ ಗುಂಡು ಹಾರಿಸಿದರೂ ಎದುರಿಸಲು ನಾನು ಸಿದ್ಧ. ಅವರನ್ನು ಶೂಟ್ ಮಾಡಲೂ ಸಿದ್ಧ ಎಂದು ರಠೋಡ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.