alex Certify ಸೋದರರು ಜಮೀನಿಗೆ ತೆರಳುವಾಗ ನಡೆದಿದೆ ಆಘಾತಕಾರಿ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋದರರು ಜಮೀನಿಗೆ ತೆರಳುವಾಗ ನಡೆದಿದೆ ಆಘಾತಕಾರಿ ಘಟನೆ

ಕಲಬುರ್ಗಿ: ಯಡ್ರಾಮಿ ತಾಲೂಕಿನ ಕಣಮೇಶ್ವರ ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ ಸೋದರರಿಬ್ಬರು ಮೃತಪಟ್ಟಿದ್ದಾರೆ. ಆಕಾಶ್(18), ಪ್ರಕಾಶ್(21) ಮೃತಪಟ್ಟವರು ಎಂದು ಹೇಳಲಾಗಿದೆ.

ಹರನಾಳ ಗ್ರಾಮದ ನಿವಾಸಿಗಳಾಗಿರುವ ಸಹೋದರರು ವಿದ್ಯುತ್ ತಂತಿ ದಾಟಿ ಜಮೀನಿಗೆ ತೆರಳುವಾಗ ಅವಘಡ ಸಂಭವಿಸಿದೆ. ಜಮೀನೊಂದರಲ್ಲಿ ಚೆಕ್ ಡ್ಯಾಂ ಕಾಮಗಾರಿ ನಡೆಯುತ್ತಿದ್ದು, ಇದಕ್ಕಾಗಿ ಅಳವಡಿಸಲಾಗಿದ್ದ ವಿದ್ಯುತ್ ತಂತಿ ದಾಟಿ ಹೋಗುವ ವೇಳೆ ವಿದ್ಯುತ್ ಪ್ರವಹಿಸಿ ಇಬ್ಬರು ಮೃತಪಟ್ಟಿದ್ದಾರೆ. ಯಡ್ರಾಮಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...