alex Certify BIG NEWS: ಹಾಡಹಗಲೇ ವಕೀಲನ ಹತ್ಯೆ ಪ್ರಕರಣ; 6 ಆರೋಪಿಗಳ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಡಹಗಲೇ ವಕೀಲನ ಹತ್ಯೆ ಪ್ರಕರಣ; 6 ಆರೋಪಿಗಳ ವಿರುದ್ಧ FIR ದಾಖಲು

ಕಲಬುರ್ಗಿ: ಕಲಬುರ್ಗಿಯಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ನೀಲಕಂಠ ಪೊಲೀಸ್ ಪಟೀಲ್, ವಿಜಯ್ ಕುಮಾರ್, ಸಿದ್ದಣ್ನಗೌಡ ಸಿಡ್ರಾಮ್, ಅವ್ವಣ್ಣ ಗುರು ಸೇರಿದಂತೆ 6 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ವಕೀಲ ಈರಣ್ಣಗೌಡ ಪಾಟೀಲ್ ರಿಯಲ್ ಎಸ್ಟೇಟ್ ಉದ್ಯಮದ ಜೊತೆಗೆ ವಕೀಲ ವೃತ್ತಿಯನ್ನೂ ಮಾಡಿಕೊಂಡಿದ್ದರು. ಈ ಮಧ್ಯೆ ಸಂಬಂಧಿಕರ ಮಧ್ಯೆ ಜಮೀನು, ಸೈಟ್ ವಿಚರವಾಗಿ ಜಗಳ ನಡೆದಿತ್ತು. ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತಾದರೂ ಎರಡು ಕುಟುಂಬಗಳ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಜಮೀನು ವಿಚಾರವಾಗಿಯೇ ಸಂಬಂಧಿಕರೇ ವಕೀಲನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ತನಿಖೆ ಮುಂದುವರೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...