alex Certify ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ‘ಕಲ್ಯಾಣ ಕರ್ನಾಟಕ’ದಲ್ಲಿ 14 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ‘ಕಲ್ಯಾಣ ಕರ್ನಾಟಕ’ದಲ್ಲಿ 14 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ 371ಜೆ ಅಡಿಯಲ್ಲಿ ನೇಮಕಾತಿ ಮತ್ತು ಬಡ್ತಿ ಪ್ರಕ್ರಿಯೆಯನ್ನು ಸರ್ಕಾರದ ವಿವಿಧ ಇಲಾಖೆಗಳು ತಕ್ಷಣ ಪ್ರಾರಂಭಿಸಬೇಕು ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ ಸಚಿವ ಸಂಪುಟ ಉಪ ಸಮಿತಿ ಸೂಚನೆ ನೀಡಿದೆ.

ವಿಧಾನಸೌಧದಲ್ಲಿ ಗುರುವಾರ 371ಜೆ ಅಡಿಯಲ್ಲಿ ಖಾಲಿ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಸಂಬಂಧಿಸಿದಂತೆ ರಚಿಸಲಾದ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಸಲಾಗಿದೆ.

ಸರ್ಕಾರದ 46 ಇಲಾಖೆಗಳಲ್ಲಿ, ನೇಮಕಾತಿ ಪ್ರಕ್ರಿಯೆ ಆರಂಭಿಸಿದ ಹಿನ್ನೆಲೆ 14,771 ಹುದ್ದೆಗಳ ನೇಮಕಾತಿ ಬಾಕಿ ಇದೆ. ಅಲ್ಲದೆ ಪ್ರಾದೇಶಿಕ ಮತ್ತು ರಾಜ್ಯಮಟ್ಟದ ಹುದ್ದೆಗಳಲ್ಲಿ 8278 ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಬೇಕಿದೆ. ಈ ಕುರಿತಾಗಿ ಸಂಬಂಧಿಸಿದ ಇಲಾಖೆಗಳು ತಕ್ಷಣವೇ ಪ್ರಕ್ರಿಯೆ ಆರಂಭಿಸುವಂತೆ ಸಚಿವ ಸಂಪುಟ ಉಪ ಸಮಿತಿ ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...