alex Certify ಗಮನಿಸಿ: ಇಂದು ಬಸ್ ಸಂಚಾರದಲ್ಲಿ ವ್ಯತ್ಯಯ; ಕಲ್ಯಾಣ ಕರ್ನಾಟಕ ಉತ್ಸವಕ್ಕೆ 300 ಬಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಇಂದು ಬಸ್ ಸಂಚಾರದಲ್ಲಿ ವ್ಯತ್ಯಯ; ಕಲ್ಯಾಣ ಕರ್ನಾಟಕ ಉತ್ಸವಕ್ಕೆ 300 ಬಸ್

ಕಲಬುರಗಿ: ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ಉತ್ಸವ ಜರುಗಲಿರುವ ಪ್ರಯುಕ್ತ ಕಲಬುರಗಿ ವಿಭಾಗ-2  ಹಾಗೂ ವಿಭಾಗ-1 ರಿಂದ ಕರಾರು ಒಪ್ಪಂದದ ಮೇಲೆ ಸುಮಾರು 300 ಸಾರಿಗೆ ಬಸ್ಸುಗಳು ನೀಡಲಾಗಿದೆ.

ಆದ್ದರಿಂದ ನಿಗಮದ ಕಲಬುರಗಿ ವಿಭಾಗ-2 ರಿಂದ ಕಾರ್ಯಾಚರಣೆಯಾಗುವ ಬಸ್‍ಗಳು ಅಂದು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಇದಕ್ಕೆ ಸಹಕರಿಸಬೇಕೆಂದು ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗ-2ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ನಿಗಮ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ ಕಲಬುರಗಿ, ಆಳಂದ, ಜೇವರ್ಗಿ, ಯಡ್ರಾಮಿ ಅಪಜಲಪುರ, ಸೇಡಂ, ಕಾಳಗಿ, ಚಿಂಚೋಳ್ಳಿ, ಹಾಗೂ ಚಿತಾಪೂರ ತಾಲೂಕುಗಳ ಸಾರ್ವಜನಿಕ ಪ್ರಯಾಣಿಕರು ಇದಕ್ಕೆ ಸಹಕರಿಸಬೇಕು. ನಂತರ ಅಂದು ಮಧ್ಯಾಹ್ನ 2 ಗಂಟೆಯಿಂದ ಯಥಾ ಪ್ರಕಾರ ಸಾರಿಗೆ ಕಾರ್ಯಾಚರಣೆ ಮಾಡಲಾಗುವುದೆಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...