alex Certify BIG NEWS: ಕರ್ನಾಟಕ ಬಂದ್ ಗೆ ಸ್ಯಾಂಡಲ್ ವುಡ್ ಬೆಂಬಲ; ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕರ್ನಾಟಕ ಬಂದ್ ಗೆ ಸ್ಯಾಂಡಲ್ ವುಡ್ ಬೆಂಬಲ; ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ಘೋಷಿಸಿದೆ. ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

ನಟ ಶಿವರಾಜ್ ಕುಮಾರ್ ಭೇಟಿ ಬಳಿಕ ಮಾತನಾಡಿದ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್, ಕರ್ನಾಟಕ ಬಂದ್ ಗೆ ಕನ್ನಡ ಚಿತ್ರರಂಗ ಬೆಂಬಲ ಘೋಷಿಸಿದೆ. ಕಾವೇರಿ ನೀರಿಗಾಗಿ ಹೋರಾಟಕ್ಕೆ ಶಿವರಾಜ್ ಕುಮಾರ್ ಬೆಂಬಲಿಸುವುದಾಗಿ ಹೇಳಿದ್ದಾರೆ. ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಪ್ರತಿಭಟನೆಯಲ್ಲಿ ಚಿತ್ರರಂಗದ ನಟ-ನಟಿಯರು ಭಾಗವಹಿಸಲಿದ್ದಾರೆ. ವಿಜಯ್ ರಾಘವೇಂದ್ರ, ಶ್ರೀಮುರುಳಿ, ಧ್ರುವ ಸರ್ಜಾ, ಪ್ರೇಮ್, ಅಜಯ್ ರಾವ್, ವಿನೋದ್ ಪ್ರಭಾಕರ್, ಮಾಲಾಶ್ರೀ, ಶೃತಿ, ಪ್ರೇಮಾ ಸೇರಿದಂತೆ ಎಲ್ಲರಿಗೂ ಆಹ್ವಾನಿಸಲಾಗಿದೆ. ಎಲ್ಲರೂ ಭಾಗವಹಿಸುವ ನಿರೀಕ್ಷೆ ಇದೆ. ಶಿವಣ್ಣ ಬರ್ತೀನಿ ಎಂದ ಮೇಲೆ ನಮಗೆ ಆನೆಬಲ ಸಿಕ್ಕಂತಾಗಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...