alex Certify BIG NEWS: ‘ಎಮರ್ಜೆನ್ಸಿ’ ಬಿಡುಗಡೆಗೆ ತಡೆಯಾಜ್ಞೆ ಕೋರಿ ಅರ್ಜಿ: ಕೇಂದ್ರ, ಸೆನ್ಸಾರ್ ಮಂಡಳಿಗೆ ಹೈಕೋರ್ಟ್ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಎಮರ್ಜೆನ್ಸಿ’ ಬಿಡುಗಡೆಗೆ ತಡೆಯಾಜ್ಞೆ ಕೋರಿ ಅರ್ಜಿ: ಕೇಂದ್ರ, ಸೆನ್ಸಾರ್ ಮಂಡಳಿಗೆ ಹೈಕೋರ್ಟ್ ನೋಟಿಸ್

ಭೋಪಾಲ್: ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ಕೋರಿ ಅರ್ಜಿ ಮಧ್ಯಪ್ರದೇಶದ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

ಚಿತ್ರದಲ್ಲಿ ಸಿಖ್ ಸಮುದಾಯ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಹಿನ್ನಲೆಯಲ್ಲಿ ಸಿನಿಮಾ ಪ್ರೊಡಕ್ಷನ್ಸ್, ಕೇಂದ್ರ ಸರ್ಕಾರ, ಸೆನ್ಸಾರ್ ಮಂಡಳಿಗೆ ಮಧ್ಯಪ್ರದೇಶ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ನಾಳೆ ಈ ಬಗ್ಗೆ ಮಧ್ಯಪ್ರದೇಶ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ‘ಎಮರ್ಜೆನ್ಸಿ’ ಸಿನಿಮಾ ಸೆಪ್ಟೆಂಬರ್ 6ರಂದು ತೆರೆ ಕಾಣಬೇಕಿತ್ತು, ಸೆನ್ಸಾರ್ ಮಂಡಳಿಯಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಹೀಗಾಗಿ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...