alex Certify Big News: ಸೆಪ್ಟೆಂಬರ್​ 28ರಂದು ಜಿಗ್ನೇಶ್​ ಮೇವಾನಿ, ಕನ್ಹಯ್ಯ ಕುಮಾರ್​ ಕಾಂಗ್ರೆಸ್​ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: ಸೆಪ್ಟೆಂಬರ್​ 28ರಂದು ಜಿಗ್ನೇಶ್​ ಮೇವಾನಿ, ಕನ್ಹಯ್ಯ ಕುಮಾರ್​ ಕಾಂಗ್ರೆಸ್​ ಸೇರ್ಪಡೆ

ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಸಿಪಿಐ ಪಕ್ಷದ ನಾಯಕ ಕನ್ಹಯ್ಯ ಕುಮಾರ್​ ಹಾಗೂ ರಾಷ್ಟ್ರೀಯ ದಲಿತ ಅಧಿಕಾರ ಮಂಚ್​​ನ ಶಾಸಕ ಜಿಗ್ನೇಶ್​ ಮೇವಾನಿ ಸೆಪ್ಟೆಂಬರ್ 28ರಂದು ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

ಈ ಇಬ್ಬರು ನಾಯಕರು ಅಕ್ಟೋಬರ್ 2 ಗಾಂಧಿ ಜಯಂತಿ ದಿನದಂದು ಕಾಂಗ್ರೆಸ್​ ಸೇರ್ಪಡೆಯಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಇದಕ್ಕೂ ಮುಂಚಿತವಾಗಿ ಅಂದರೆ 114ನೇ ಭಗತ್​ ಸಿಂಗ್​​ ಜಯಂತಿಯಂದು ಜಿಗ್ನೇಶ್​ ಹಾಗೂ ಕನ್ಹಯ್ಯ ‘ಕೈ’ ಕೋಟೆಗೆ ಕಾಲಿಡಲಿದ್ದಾರೆ ಎನ್ನಲಾಗಿದೆ.

ಜಿಗ್ನೇಶ್​ ಮೇವಾನಿ ಗುಜರಾತ್​ನ ವಡ್ಗಾಮ್​ ಕ್ಷೇತ್ರದ ಶಾಸಕ ಹಾಗೂ ದಲಿತ ನಾಯಕರಾಗಿದ್ದಾರೆ. ಇವರನ್ನು ಕಾಂಗ್ರೆಸ್​ ರಾಜ್ಯ ಘಟಕದ ಕಾರ್ಯದರ್ಶಿಯಾಗಿ ನೇಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಜೆಎನ್​ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾಗಿರುವ ಕನ್ಹಯ್ಯ ಕುಮಾರ್​ ಕಾಂಗ್ರೆಸ್​ ಸೇರ್ಪಡೆಗೊಳ್ಳುವ ಮೂಲಕ ಬಿಹಾರದಲ್ಲಿ ‘ಕೈ’ಗೆ ಬಲ ನೀಡಲು ಶ್ರಮಿಸಲಿದ್ದಾರೆ ಎನ್ನಲಾಗ್ತಿದೆ.

ವರದಿಗಳ ಪ್ರಕಾರ ಕನ್ಹಯ್ಯ ಈಗಾಗಲೇ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಜೊತೆ ಸಾಕಷ್ಟು ಬಾರಿ ಮೀಟಿಂಗ್​ ಮಾಡಿದ್ದು ಪಕ್ಷದಲ್ಲಿ ತಮ್ಮ ಸ್ಥಾನದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಹಾರದ ಬೆಗುಸರಾಯ್ನಿಂದ ಕನ್ಹಯ್ಯ ಕಣಕ್ಕೆ ಇಳಿದಿದ್ದರು. ಆದರೆ ಬಿಜೆಪಿಯ ಗಿರಿರಾಜ್​ ಸಿಂಗ್​ ಎದುರು ಸೋತಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...