alex Certify ಭಾಷಣದಲ್ಲಿ ಕುವೆಂಪು ಕವನ ಉಲ್ಲೇಖಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾಷಣದಲ್ಲಿ ಕುವೆಂಪು ಕವನ ಉಲ್ಲೇಖಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಚೊಚ್ಚಲ ಭಾಷಣದಲ್ಲಿ ನೂತನವಾಗಿ ಆಯ್ಕೆಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದ ಮೊದಲ ಜ್ಞಾನಪೀಠ ಪುರಸ್ಕೃತ ಕವಿ ಕುವೆಂಪು ಅವರ ಕವನವನ್ನು ವಿಶೇಷವಾಗಿ ಉಲ್ಲೇಖಿಸಿದ್ದಾರೆ.

ಕುವೆಂಪು ಅವರ ಕೃತಿಯ ಉಲ್ಲೇಖವನ್ನು ಓದಿದ ದ್ರೌಪದಿ ಕುವೆಂಪು ಅವರ ಆದರ್ಶಗಳನ್ನು ಅನುಸರಿಸಲು ಯುವಕರಿಗೆ ಕರೆ ನೀಡಿದರು.

ಕನ್ನಡ ಭಾಷೆಯ ಮೂಲಕ ಭಾರತೀಯ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಮಹಾನ್ ರಾಷ್ಟ್ರಕವಿ ಕುವೆಂಪು ಅವರು ಬರೆದಿರುವಂತೆ, ನಾನು ಅಳಿವೆ, ನೀನು ಅಳಿವೆ, ನಮ್ಮ ಎಲುಬುಗಳ ಮೇಲೆ, ಮೂಡುವುದು – ಮೂಡುವುದು ನವಭಾರತದ ಲೀಲೆ’ ಇದರರ್ಥ ತಾಯ್ನಾಡಿಗಾಗಿ ನಾಗರಿಕರ ಉನ್ನತಿಗಾಗಿ ಸಂಪೂರ್ಣ ತ್ಯಾಗ ಮಾಡುವ ಕವಿಯ ಸ್ಪಷ್ಟ ಕರೆ ಇದಾಗಿದೆ ಎಂದು ಹೇಳಿದ ರಾಷ್ಟ್ರಪತಿಗಳು ಭಾರತವನ್ನು ನಿರ್ಮಿಸಲು ಹೊರಟಿರುವ ದೇಶದ ಯುವಕರಿಗೆ ಈ ಆದರ್ಶಗಳನ್ನು ಅನುಸರಿಸಲು ನನ್ನ ವಿಶೇಷ ಮನವಿಯಾಗಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...