alex Certify ಕಸಾಪದಿಂದ ಪ್ರತಿ ತಿಂಗಳು ‘ಕನ್ನಡ ಧ್ರುವತಾರೆ’ ಕಾರ್ಯಕ್ರಮ: ವಿವಿಧ ಕ್ಷೇತ್ರಗಳ ಸಾಧಕರೊಂದಿಗೆ ಸಂವಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಸಾಪದಿಂದ ಪ್ರತಿ ತಿಂಗಳು ‘ಕನ್ನಡ ಧ್ರುವತಾರೆ’ ಕಾರ್ಯಕ್ರಮ: ವಿವಿಧ ಕ್ಷೇತ್ರಗಳ ಸಾಧಕರೊಂದಿಗೆ ಸಂವಾದ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರತಿ ತಿಂಗಳು ಕನ್ನಡ ಧ್ರುವತಾರೆ ಕಾರ್ಯಕ್ರಮ ಆಯೋಜಿಸಲಾಗುವುದು.

ಕನ್ನಡ ನಾಡಿನ ವಿಶೇಷ ಮತ್ತು ಅಜ್ಞಾತ ಸಾಧಕರೊಂದಿಗೆ ಸಂವಾದ ನಡೆಸುವ ವಿಶಿಷ್ಟ ಕಾರ್ಯಕ್ರಮ ಇದಾಗಿದ್ದು, ಮೊದಲ ಕಾರ್ಯಕ್ರಮ ಆಗಸ್ಟ್ 19ರಂದು ಸಂಜೆ 5 ಗಂಟೆಗೆ ನಟ ರಮೇಶ್ ಅರವಿಂದ್ ಅವರೊಂದಿಗೆ ನಡೆಯಲಿದೆ.

ಕಸಾಪ ಕೃಷ್ಣರಾಜ ಪರಿಷತ್ ಮಂದಿರದಲ್ಲಿ ಕನ್ನಡ ಧ್ರುವತಾರೆ ಕಾರ್ಯಕ್ರಮ ನಡೆಯಲಿದೆ. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶ ಡಾ.ಸಿ.ಎನ್. ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರತಿ ತಿಂಗಳು ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಕನ್ನಡ ಧ್ರುವತಾರೆ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ. ವಿವಿಧ ಕ್ಷೇತ್ರಗಳ ಸಾಧಕರು ಅತಿಥಿಗಳಾಗಿ ಭಾಗವಹಿಸಿ ಅನುಭವ ಹಂಚಿಕೊಳ್ಳಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...