alex Certify ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ: ನ. 11 ರಿಂದ 3 ದಿನ ನುಡಿ ಜಾತ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ: ನ. 11 ರಿಂದ 3 ದಿನ ನುಡಿ ಜಾತ್ರೆ

ಬೆಂಗಳೂರು: ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸರ್ಕಾರ ಒಪ್ಪಿಗೆ ನೀಡಿದೆ. ಅಧಿಕೃತ ಘೋಷಣೆ ಮೂರ್ನಾಲ್ಕು ದಿನಗಳಲ್ಲಿ ಹೊರಬೀಳಲಿದೆ ಎಂದು ಹೇಳಲಾಗಿದೆ.

ಸೆಪ್ಟೆಂಬರ್ 23 ರಿಂದ 25 ರವರೆಗೆ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿತ್ತು. ಆದರೆ ದಾಸಶ್ರೇಷ್ಠ ಕನಕದಾಸರ ಜಯಂತಿ ನವೆಂಬರ್ 11 ರಂದು ಇದೆ. ಹಾವೇರಿ ಜಿಲ್ಲೆಯಲ್ಲಿ ಜನಿಸಿದ ಕನಕದಾಸರ ಗೌರವಾರ್ಥ ನವೆಂಬರ್ 11ರಂದು ಸಾಹಿತ್ಯ ಸಮ್ಮೇಳನ ಆರಂಭಿಸಲು ಚಿಂತನೆ ನಡೆದಿದೆ.

ನವೆಂಬರ್ 11 ರಿಂದ 13 ರವರೆಗೆ ಸಾಹಿತ್ಯ ಸಮ್ಮೇಳನ ನಡೆಸಲು ದಿನಾಂಕ ನಿಗದಿಪಡಿಸಿದ್ದು, ಅಧಿಕೃತ ಘೋಷಣೆ ಶೀಘ್ರ ಹೊರಬೀಳಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...