alex Certify ಸೆ.29 ಕ್ಕೆ ‘ಕರ್ನಾಟಕ ಬಂದ್’ : ಇಂದು ‘ಫಿಲ್ಮ್ ಚೇಂಬರ್’ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆ.29 ಕ್ಕೆ ‘ಕರ್ನಾಟಕ ಬಂದ್’ : ಇಂದು ‘ಫಿಲ್ಮ್ ಚೇಂಬರ್’ ಮಹತ್ವದ ಸಭೆ

ಬೆಂಗಳೂರು : ತಮಿಳುನಾಡಿಗೆ ‘ಕಾವೇರಿ’ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.29 ಕ್ಕೆ ‘ಕರ್ನಾಟಕ ಬಂದ್’ಕರೆ ನೀಡಲಾಗಿದೆ.

ಕರ್ನಾಟಕ ಬಂದ್ ಗೆ ಬೆಂಬಲ ನೀಡುವ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ವಿವಿಧ ಸಂಘಟನೆಗಳ ಜೊತೆ ಸಭೆ ನಡೆಸಲಿದೆ ಎಂದು ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್ ಹೇಳಿದರು.

ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಮಾಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಹಿರಿಯ ಚಳವಳಿಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಡಿದ್ದು ಅಂದರೆ ಸೆಪ್ಟೆಂಬರ್ 29ರಂದು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಕಾವೇರಿ ಹೋರಾಟಕ್ಕೆ ಸ್ಯಾಂಡಲ್ ವುಡ್ ಬೆಂಬಲ

ಸ್ನೇಹಿತರೆ ನಮ್ಮ ಕಾವೇರಿ ನಮ್ಮ ಹಕ್ಕು . ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ ಎಂದು ನಟ ಕಿಚ್ಚ ಸುದೀಪ್ ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ನಟ ಕಿಚ್ಚ ಸುದೀಪ್ ಸೇರಿದಂತೆ ಹಲವು ತಾರೆಯರು ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...