alex Certify BIG BREAKING: ಸಿಎಂ ಸಂಧಾನ ಸಕ್ಸಸ್, ನಾಳಿನ ಕರ್ನಾಟಕ ಬಂದ್ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಿಎಂ ಸಂಧಾನ ಸಕ್ಸಸ್, ನಾಳಿನ ಕರ್ನಾಟಕ ಬಂದ್ ಮುಂದೂಡಿಕೆ

ಬೆಂಗಳೂರು: ಸಿಎಂ ಭರವಸೆ ಹಿನ್ನಲೆಯಲ್ಲಿ ನಾಳಿನ ಕರ್ನಾಟಕ ಬಂದ್ ಮುಂದೂಡಲಾಗಿದೆ. ಬಂದ್ ಮುಂದೂಡುವಂತೆ ಸಿಎಂ ತಿಳಿಸಿದ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದೆ.

ನಾಳಿನ ಬಂದ್ ಮುಂದೂಡಲು ಕನ್ನಡಪರ ಸಂಘಟನೆಗಳು ನಿರ್ಧಾರ ಕೈಗೊಂಡಿವೆ. ಸಿಎಂ ಭೇಟಿಯ ಬಳಿಕ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಈ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ನಡೆಸಿದ ಸಂಧಾನ ಯಶಸ್ವಿಯಾಗಿದೆ.  ನಾಳೆ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಹಿಂಪಡೆಯಲಾಗಿದೆ.

ಗಡಿಯಲ್ಲಿ ಪುಂಡಾಟಿಕೆ ನಡೆಸುತ್ತಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಡಿಸೆಂಬರ್ 31 ರಂದು ಹೊಸ ವರ್ಷದ ಹಿಂದಿನ ದಿನವಾಗಿದ್ದು, ವ್ಯಾಪಾರ ವಹಿವಾಟುದಾರರಿಗೆ ತೊಂದರೆಯಾಗುತ್ತದೆ. ಅಲ್ಲದೆ, ಕನ್ನಡ ಸಿನಿಮಾಗಳ ಬಿಡುಗಡೆ ಕೂಡ ಇರುವುದರಿಂದ ಉದ್ಯಮದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಕನ್ನಡಿಗರಿಗೆ ತೊಂದರೆ ಮಾಡುವ ಬಂದ್ ಬೇಡವೆಂಬ ಅಭಿಪ್ರಾಯ ಕೇಳಿ ಬಂದಿದ್ದು, ಅನೇಕ ಸಂಘಟನೆಗಳು ಬಂದ್ ಬೆಂಬಲಿಸಿರಲಿಲ್ಲ. ಕೆಲವು ಸಂಘಟನೆಗಳು ನೈತಿಕ ಬೆಂಬಲವನ್ನು ನೀಡಿದ್ದವು. ಇವೆಲ್ಲ ಕಾರಣಗಳಿಂದಾಗಿ ಬಂದ್ ಮುಂದೂಡಲಾಗಿದೆ. ಪ್ರಮುಖವಾಗಿ ಸಿಎಂ ಕನ್ನಡಪರ ಸಂಘಟನೆಗಳ ಹೋರಾಟಗಾರ ವಾಟಾಳ್ ನಾಗರಾಜ್ ಮೊದಲಾದವರೊಂದಿಗೆ ನಡೆಸಿದ ಸಂಧಾನ ಯಶಸ್ವಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...