alex Certify BIG NEWS: ಮಹಾ ಮಳೆಗೆ ಸಿಂಧನೂರು-ಹೆಮ್ಮಡಗಾ ರಸ್ತೆ ಜಲಾವೃತ; ಕರ್ನಾಟಕ- ಗೋವಾ ರಾಜ್ಯ ಹೆದ್ದಾರಿ ಬಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಾ ಮಳೆಗೆ ಸಿಂಧನೂರು-ಹೆಮ್ಮಡಗಾ ರಸ್ತೆ ಜಲಾವೃತ; ಕರ್ನಾಟಕ- ಗೋವಾ ರಾಜ್ಯ ಹೆದ್ದಾರಿ ಬಂದ್

ಬೆಳಗಾವಿ: ಮಹಾ ಮಳೆಯಿಂದಾಗಿ ಬೆಳಗಾವಿ ಜಿಲ್ಲೆ ಖಾನಾಪುರದಾದ್ಯಂತ ಹಲವು ಗ್ರಾಮಗಳು ಮುಳುಗಡೆಯಾಗಿದ್ದು, ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಸಿಂಧನೂರು-ಹೆಮ್ಮಗಡಾ ರಾಜ್ಯ ಹೆದ್ದಾರಿ ನದಿಯಂತಾಗಿದ್ದು, ಅಲಾತ್ರ ಹಳ್ಳ ಉಕ್ಕಿ ಹರಿಯುತ್ತಿದೆ.

ಖಾನಾಪುರದಲ್ಲಿ ಭಾರಿ ಮಳೆಯಿಂದಾಗಿ 30ಕ್ಕೂ ಹೆಚ್ಚು ಗ್ರಾಮಾಗಳು ಜಲಾವೃತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ಥವ್ಯಸ್ಥಗೊಂಡಿದೆ. ರಣಮಳೆಯಿಂದಾಗಿ ಅಲಾತ್ರಿ ಹಳ್ಳ ಉಕ್ಕಿ ಹರಿಯುತ್ತಿದ್ದು, ಕರ್ನಾಟದಿಂದ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಸಿಂಧನೂರು-ಹೆಮ್ಮಡಗಾ ಹೆದ್ದಾರಿ ಜಲಾವೃತಗೊಂಡಿದೆ. ರಸ್ತೆಯ ಮೇಲೆ 4-5 ಅಡಿ ನೀರು ಹರಿಯುತ್ತಿದ್ದು, ಮುಂಜಾಗೃತಾ ಕ್ರಮವಾಗಿ ರಾಜ್ಯ ಹೆದ್ದಾರಿಯನ್ನು ಪೊಲೀಸರು ಬಂದ್ ಮಾಡಿದ್ದಾರೆ.

ಪೊಲೀಸ್ ಇಲಾಖೆಯಿಂದ ಬ್ಯಾರಿಕೇಡ್ ಗಳನ್ನು ಹಾಕಿ ರಸ್ತೆ ಬಂದ್ ಮಾಡಲಾಗಿದ್ದು, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಉಭಯ ರಾಜ್ಯಗಳ ನಡುವೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...