alex Certify BIG NEWS: ಹಿಜಾಬ್ ವಿದ್ಯಾರ್ಥಿನಿ ಸೋದರನ ಮೇಲೆ ಹಲ್ಲೆ, ಆಸ್ತಿಗೆ ಹಾನಿ; ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಜಾಬ್ ವಿದ್ಯಾರ್ಥಿನಿ ಸೋದರನ ಮೇಲೆ ಹಲ್ಲೆ, ಆಸ್ತಿಗೆ ಹಾನಿ; ಆರೋಪ

ಉಡುಪಿ: ಉಡುಪಿಯಲ್ಲಿ ಸೋಮವಾರ ರಾತ್ರಿ ತನ್ನ ಸಹೋದರನ ಮೇಲೆ ಬಲಪಂಥೀಯ ಗುಂಪಿನ ಸದಸ್ಯರು ಹಲ್ಲೆ ನಡೆಸಿ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಹಿಜಾಬ್ ಪ್ರಕರಣದ ಅರ್ಜಿದಾರರಲ್ಲಿ ಒಬ್ಬರು ಆರೋಪಿಸಿದ್ದಾರೆ.

ದಾಳಿಕೋರರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಸರಣಿ ಟ್ವೀಟ್‌ಗಳಲ್ಲಿ ಒತ್ತಾಯಿಸಿದ್ದಾರೆ.

ನಾನು ನನ್ನ ಹಕ್ಕಾಗಿರುವ ಹಿಜಾಬ್‌ ಗಾಗಿ ಹೋರಾಟ ಮಾಡುತ್ತೇನೆ ಎಂಬ ಕಾರಣಕ್ಕೆ ನನ್ನ ಸಹೋದರನ ಮೇಲೆ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದೆ. ನಮ್ಮ ಆಸ್ತಿಯೂ ನಾಶವಾಯಿತು. ಏಕೆ? ನನ್ನ ಹಕ್ಕನ್ನು ನಾನು ಕೇಳುತ್ತೇನೆ. ಅವರ ಮುಂದಿನ ಬಲಿಪಶು ಯಾರು? ನಾನು ಕ್ರಮಕ್ಕೆ ಪೊಲೀಸರಿಗೆ ಒತ್ತಾಯಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಆಕೆಯ 20 ವರ್ಷದ ಸಹೋದರ ಸೈಫ್ ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 150 ಜನರ ಗುಂಪು ಸೈಫ್ ಮೇಲೆ ಹಲ್ಲೆ ನಡೆಸಿದೆ ಎಂದು ವಿದ್ಯಾರ್ಥಿನಿಗೆ ಪರಿಚಿತರಾಗಿರುವ ಮಸೂದ್ ಮನ್ನಾ ಟ್ವೀಟ್‌ನಲ್ಲಿ ಹೇಳಿಕೊಂಡಿದ್ದಾರೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಜೆ.ಎಂ. ಖಾಜಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರನ್ನೊಳಗೊಂಡ ಕರ್ನಾಟಕ ಹೈಕೋರ್ಟ್‌ನ ಪೂರ್ಣ ಪೀಠವು ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸುತ್ತಿರುವ ಪ್ರಕರಣದ ವಿಚಾರಣೆ ನಡೆಸುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...