alex Certify ಕರ್ನಾಟಕ ಸೇರುವ ಠರಾವು ಪಾಸ್ ಮಾಡಿದ್ದಕ್ಕೆ ಬೆದರಿಕೆ ಹಾಕಿದ ಮಹಾರಾಷ್ಟ್ರ ಸರ್ಕಾರಕ್ಕೆ ಗಡಿನಾಡು ಕನ್ನಡಿಗರ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಸೇರುವ ಠರಾವು ಪಾಸ್ ಮಾಡಿದ್ದಕ್ಕೆ ಬೆದರಿಕೆ ಹಾಕಿದ ಮಹಾರಾಷ್ಟ್ರ ಸರ್ಕಾರಕ್ಕೆ ಗಡಿನಾಡು ಕನ್ನಡಿಗರ ತಿರುಗೇಟು

ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟೆ ತಾಲೂಕಿನ ಗ್ರಾಮಸ್ಥರು ಕರ್ನಾಟಕಕ್ಕೆ ಸೇರುವುದಾಗಿ ಹೇಳಿದ್ದಕ್ಕೆ ಮಹಾರಾಷ್ಟ್ರ ಸರ್ಕಾರ ಬೆದರಿಕೆ ಹಾಕಿದೆ.

ಗ್ರಾಮ ಪಂಚಾಯಿತಿ ವಿಸರ್ಜಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಬೆದರಿಸಿದ್ದು, ಈ ಮೂಲಕ ಉದ್ಧಟತನ ಮೆರೆಯುತ್ತಿದೆ ಎಂದು ಆರೋಪಿಸಲಾಗಿದೆ. ಕರ್ನಾಟಕಕ್ಕೆ ಸೇರ್ಪಡೆಯಾಗಲು ಠರಾವು ಪಾಸ್ ಮಾಡಿದ ಗ್ರಾಮ ಪಂಚಾಯಿತಿ ವಿಸರ್ಜಿಸಲಾಗುವುದು ಮತ್ತು ಗ್ರಾಮ ಅಧಿಕಾರಿಗಳನ್ನು ಸೇವೆಯಿಂದ ತೆಗೆದು ಹಾಕುವುದಾಗಿ ಮಹಾರಾಷ್ಟ್ರ ಸರ್ಕಾರದಿಂದ ಬೆದರಿಕೆ ಹಾಕಲಾಗಿದೆ.

ಗ್ರಾಮ ಪಂಚಾಯಿತಿ ವಿಸರ್ಜನೆ ಬೆದರಿಕೆಗೆ ಗಡಿನಾಡು ಕನ್ನಡಿಗರು ಸೆಡ್ಡು ಹೊಡೆದು ನಿಂತಿದ್ದಾರೆ. ಗಲ್ಲು ಶಿಕ್ಷೆಗೂ ನಾವು ಹೆದರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...