alex Certify 79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದ್ದ ಕರ್ನಾಟಕ : ಸಿಎಂ ಸಿದ್ದರಾಮಯ್ಯ ಅಭಿನಂದನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದ್ದ ಕರ್ನಾಟಕ : ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು : 79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್‌ ಬಿಹಾರ್‌ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್‌ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, 79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್‌ ಬಿಹಾರ್‌ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್‌ ತಂಡಕ್ಕೆ ಅಭಿನಂದನೆಗಳು. ಈ ಗೆಲುವು ಸಂಕ್ರಾಂತಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ ಎಂದಿದ್ದಾರೆ.

ಆರಂಭಿಕ ಬ್ಯಾಟರ್‌ ಪ್ರಖರ್‌ ಚತುರ್ವೇದಿ ಅಜೇಯ 404 ರನ್‌ ಗಳಿಸಿ ದಾಖಲೆ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಕರ್ನಾಟಕ ತಂಡವು 890 ರನ್‌ಗಳ ದಾಖಲೆಯ ಮೊತ್ತವನ್ನು ಪೇರಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. ಯುವ ಆಟಗಾರರು ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲಿ ಎಂದು ಮನಃಪೂರ್ವಕವಾಗಿ ಹಾರೈಸುತ್ತಿದ್ದೇನೆ ಎಂದು ಶುಭ ಹಾರೈಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...