alex Certify ʼಕಾಂಗ್ರೆಸ್ ನಾಯಕರು ಖಾಲಿಯಿಲ್ಲದ ಸಿಎಂ ಹುದ್ದೆಗಾಗಿ ಪೈಪೋಟಿ ನಡೆಸುತ್ತಿದ್ದಾರೆʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಕಾಂಗ್ರೆಸ್ ನಾಯಕರು ಖಾಲಿಯಿಲ್ಲದ ಸಿಎಂ ಹುದ್ದೆಗಾಗಿ ಪೈಪೋಟಿ ನಡೆಸುತ್ತಿದ್ದಾರೆʼ

ಹುಬ್ಬಳ್ಳಿ: ಕಾಂಗ್ರೆಸ್ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ, ಖಾಲಿಯಿಲ್ಲದ ಸಿಎಂ ಹುದ್ದೆಗಾಗಿ ಪೈಪೋಟಿ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಜೋಶಿ, ಕಾಂಗ್ರೆಸ್ ನಾಯಕರು ಜನರ ತೀರ್ಪಿಗೆ ಗೌರವ ಕೊಡುತ್ತಿಲ್ಲ. ಅವರುಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬಗ್ಗೆ ಹಾಗೂ ಪ್ರಧಾನಿ ಮೋದಿಯವರ ಬಗ್ಗೆ ಅನಗತ್ಯ ಆರೋಪಗಳನ್ನು ಮಾಡುತ್ತ ಪ್ರಜಾಪ್ರಭುತ್ವದ ಆಶಯಗಳಿಗೆ ಅಗೌರವಯುತವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಗುಡುಗಿದರು.

ಸಿದ್ದರಾಮಯ್ಯನವರು ಖಾಲಿಯಿಲ್ಲದ ರಾಜ್ಯದ ಸಿಎಂ ಹುದ್ದೆ ಬಗ್ಗೆ ಮಾತನಾಡುತ್ತಾ ಪೈಪೋಟಿ ನಡೆಸಿದ್ದಾರೆ. ರಾಹುಲ್ ಗಾಂಧಿ ಹಾಸ್ಯಾಸ್ಪದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಪ್ರಹ್ಲಾದ್‌ ಜೋಷಿ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...