alex Certify ʼಮಾಜಿ ಸಿಎಂʼ ಎಂದು ಪ್ರಸ್ತಾಪವಾಗಿದ್ದಕ್ಕೆ ಕುಮಾರಸ್ವಾಮಿ ಕೆಂಡಾಮಂಡಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಮಾಜಿ ಸಿಎಂʼ ಎಂದು ಪ್ರಸ್ತಾಪವಾಗಿದ್ದಕ್ಕೆ ಕುಮಾರಸ್ವಾಮಿ ಕೆಂಡಾಮಂಡಲ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ತನಗೆ ಸಿಸಿಬಿ ನೋಟಿಸ್ ನೀಡುತ್ತಿದ್ದಂತೆಯೇ ನಿರೂಪಕಿ ಅನುಶ್ರೀ ಮಾಜಿ ಸಿಎಂ ಓರ್ವರಿಗೆ ಕರೆ ಮಾಡಿದ್ದರು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಹೆಚ್.ಡಿ ಕುಮಾರಸ್ವಾಮಿ ಆ ಮಾಜಿ ಸಿಎಂ ಯಾರು ಎಂಬುದನ್ನು ಬಹಿರಂಗಪಡಿಸಲಿ. ಸತ್ಯಾಸತ್ಯತೆ ಹೊರಬರಲಿ ಎಂದು ಒತ್ತಾಯಿಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಡ್ರಗ್ಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀ ಪರ ಮಾಜಿ ಸಿಎಂ ಒಬ್ಬರು ಸಿಸಿಬಿ ತನಿಖೆ ಮೇಲೆ ಒತ್ತಡ ಹಾಕುತ್ತಿದ್ದಾರೆ. ಈ ಮೂಲಕ ಅನುಶ್ರೀ ರಕ್ಷಣೆಯಾಗಿದೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ನಾನೂ ಸೇರಿದಂತೆ 6 ಜನ ಮಾಜಿ ಸಿಎಂಗಳಿದ್ದಾರೆ. ಯಾವ ಮಾಜಿ ಸಿಎಂ ಡ್ರಗ್ಸ್ ಪ್ರಕರಣದ ತನಿಖೆಯಾಗದಂತೆ ಒತ್ತಡ ಹೇರುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದಿದ್ದಾರೆ.

ಡ್ರಗ್ಸ್ ಕೇಸ್ ಹಳ್ಳ ಹಿಡಿಯುತ್ತಿದೆ ಎಂದು ನಾನು ಈ ಮೊದಲೇ ಹೇಳಿದ್ದೆ. ನನಗೆ ಅನುಶ್ರೀ ಬಗ್ಗೆ ಗೊತ್ತಿಲ್ಲ. ಆಕೆಯನ್ನು ಜೀವನದಲ್ಲಿ ಇದುವರೆಗೂ ಭೇಟಿಯಾಗಿಲ್ಲ. ಯಾವ ಮಾಜಿ ಸಿಎಂ ತನಿಖೆ ಮೇಲೆ ಒತ್ತಡ ಹಾಕಿದ್ದಾರೆ ಎಂಬುದನ್ನು ಹೇಳಲಿ. ಅನುಶ್ರೀ ಕಾಲ್ ಲಿಸ್ಟ್ ನಲ್ಲಿ 2 ಬಾರಿ ಮಾಜಿ ಸಿಎಂ ಆದವರು ಎಂದು ಬರುತ್ತಿದೆ ಎನ್ನುತ್ತಿದ್ದಾರೆ. ನಾನು ಕೂಡ ಎರಡು ಬಾರಿ ಸಿಎಂ ಆದವನು. ಜನರು ನಮ್ಮನ್ನು ಕೆಟ್ಟ ಮನೋಭಾವದಿಂದ ನೋಡುವಂತಾಗಿದೆ. ಸತ್ಯಾಸತ್ಯತೆ ಹೊರಬರಲಿ ಎಂದು ಆಗ್ರಹಿಸಿದರು..

ಮಾಜಿ ಸಿಎಂ ಅನುಶ್ರೀ ರಕ್ಷಿಸುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅಧಿಕಾರಿ ಯಾರು? ಒಂದು ವೇಳೆ ಇದು ಮಾಧ್ಯಮಗಳ ಕಪೋಲಕಲ್ಪಿತವಾಗಿದ್ದರೆ ಸರ್ಕಾರ ಮಾಧ್ಯಮಗಳ ಮೇಲೆ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...