alex Certify ʼರೇಪ್ʼ ಪದ ಬಳಕೆ ಶೋಭೆ ತರಲ್ಲ; ಸಿದ್ದರಾಮಯ್ಯಗೆ ಬಾಲಚಂದ್ರ ಜಾರಕಿಹೊಳಿ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼರೇಪ್ʼ ಪದ ಬಳಕೆ ಶೋಭೆ ತರಲ್ಲ; ಸಿದ್ದರಾಮಯ್ಯಗೆ ಬಾಲಚಂದ್ರ ಜಾರಕಿಹೊಳಿ ತಿರುಗೇಟು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಾದವನ್ನು ಒಪ್ಪುವುದಿಲ್ಲ. ರೇಪ್ ಎಂಬ ಪದ ಬಳಕೆ ಶೋಭೆ ತರಲ್ಲ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ಯುವತಿಯ 34 ಸೆಕೆಂಡುಗಳ ವಿಡಿಯೋ ಇಟ್ಟುಕೊಂಡು ಸಹೋದರ ರಮೇಶ್ ಜಾರಕಿಹೊಳಿ ಮೇಲೆ ಕೇಸ್ ಹಾಕಬೇಕು ಎಂಬುದು ಸರಿಯಲ್ಲ. ಯುವತಿ ಸ್ವ ಇಚ್ಛೆಯಿಂದ ಮಾತನಾಡಿದ್ದಾಳೋ ಅಥವಾ ಯಾರದ್ದೋ ಬಲವಂತದಿಂದ ಮಾತನಾಡಿದ್ದಾಳೋ ಗೊತ್ತಿಲ್ಲ. ಹಾಗಾಗಿ ಸಿದ್ದರಾಮಯ್ಯ ಅವರ ಹೇಳಿಕೆ ಒಪ್ಪಲು ಸಾಧ್ಯವಿಲ್ಲ ಎಂದರು.

ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ – ಹೈಕೋರ್ಟ್ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಲಿ: ಸಿದ್ದರಾಮಯ್ಯ ಆಗ್ರಹ

ಸಿದ್ದರಾಮಯ್ಯನವರು ರೇಪ್ ಕೇಸ್ ಹಾಕಬೇಕು ಎಂದಿದ್ದಾರೆ. ದಯಮಾಡಿ ರೇಪ್ ಎಂಬ ಶಬ್ಧ ಬಳಸಬೇಡಿ. ಇಂಥಹ ಹೇಳಿಕೆ ನಿಮಗೆ ಶೋಭೆತರಲ್ಲ. ಯುವತಿಗೆ ರಕ್ಷಣೆ ನೀಡಲು ಸರ್ಕಾರ ಸಿದ್ಧವಿದೆ. ಆಕೆ ಬಂದು ಹೇಳಿಕೆಗಳನ್ನು ದಾಖಲಿಸಲಿ ಎಂದು ಹೇಳಿದರು.

ಒಂದು ಟೀಂ ಯುವತಿಯನ್ನು ಒತ್ತಾಯಪೂರ್ವಕವಾಗಿ ಮುಂದಿಟ್ಟುಕೊಂಡು ವಿಡಿಯೋ ಮಾಡಿಸಿದ್ದಾರೆ ಎಂಬ ಸುದ್ದಿ ಇದೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...