alex Certify ʼಸಂಕಷ್ಟದ ಸಮಯದಲ್ಲಿ ಜನತೆಯ ನೆರವಿಗೆ ಧಾವಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಸಂಕಷ್ಟದ ಸಮಯದಲ್ಲಿ ಜನತೆಯ ನೆರವಿಗೆ ಧಾವಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರʼ

ಕೊರೊನಾದ ಸಂಕಷ್ಟದ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲಾ ವರ್ಗದ ಜನರಿಗೆ ನೆರವು ನೀಡಿರುವುದು ಸ್ವಾಗತಾರ್ಹ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸ್ವಾವಲಂಬಿ ಭಾರತಕ್ಕೆ ಮತ್ತು ಆರ್ಥಿಕತೆಯನ್ನ ಹೆಚ್ಚಿಸಲು ಉದ್ಯೋಗ ಸೃಷ್ಠಿಗಾಗಿ ಪ್ರಧಾನಿ ಮೋದಿ ಈಗಾಗಲೇ ಹೆಜ್ಜೆ ಇಟ್ಟಿದ್ದು 20 ಲಕ್ಷ ಕೋಟಿ ಪ್ಯಾಕೇಜ್‍ ನ್ನು ಘೋಷಣೆ ಮಾಡಿದ್ದಾರೆ.

ವಲಸೆ ಕಾರ್ಮಿಕರು, ಅಸಂಘಟಿತ ಕಾರ್ಮಿಕರು, ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡು ಸಂಕಷ್ಟ ಅನುಭವಿಸುತ್ತಿರುವ ಕುಟುಂಬಗಳಿಗೆ ನೇರ ನೆರವು ನೀಡಿದ್ದಾರೆ. ಒಂದು ರಾಷ್ಟ್ರ ಒಂದು ಪಡಿತರ ಕಾರ್ಡ್ ಮೂಲಕ ದೇಶದ ಎಲ್ಲೆಯಾದರೂ ಪಡಿತರವನ್ನ ಪಡೆಯಬಹುದಾಗಿದೆ ಎಂದರು.

ರಾಜ್ಯ ಸರ್ಕಾರವೂ ಕೂಡ ಇಂತಹ ಸಂಕಷ್ಟದ ಸಮಯದಲ್ಲಿ ಎಲ್ಲಾ ವರ್ಗದ ಜನರಿಗೆ ನೆರವು ನೀಡಿರುವುದು ಶ್ಲಾಘನೀಯ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಅಭಿನಂದನೆಗಳು ಎಂದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...