alex Certify ಅಂಗನವಾಡಿ ಕಾರ್ಯಕರ್ತೆಯರಿಗೆ ‘ನೆಮ್ಮದಿ’ ಸುದ್ದಿ ನೀಡಿದ ಸಚಿವೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆಯರಿಗೆ ‘ನೆಮ್ಮದಿ’ ಸುದ್ದಿ ನೀಡಿದ ಸಚಿವೆ

ದೇಶಕ್ಕೆ ಮಹಾಮಾರಿಯಾಗಿ ಪರಿಣಮಿಸಿರುವ ಕೊರೊನಾ ವಿರುದ್ಧ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಇವರ ಜೊತೆಗೆ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಹ ಈ ಹೋರಾಟಕ್ಕೆ ತಮ್ಮದೇ ಆದ ರೀತಿಯಲ್ಲಿ ಸಹಕರಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ನೆಮ್ಮದಿಯ ಸುದ್ದಿಯೊಂದನ್ನು ನೀಡಿದ್ದಾರೆ. ಇನ್ನು ಮುಂದೆ ಪ್ರತಿ ತಿಂಗಳು 10ನೇ ತಾರೀಖಿನೊಳಗೆ ಗೌರವ ಧನ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಶಿಕಾರಿಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪೌಷ್ಟಿಕ ಆಹಾರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರಂತೆ ಅಂಗನವಾಡಿ ಕಾರ್ಯಕರ್ತೆಯರಿಗೂ 30 ಲಕ್ಷ ರೂ. ವಿಮೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...