alex Certify ಅತ್ತೆಯ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದ ಆರ್. ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ತೆಯ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದ ಆರ್. ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ

ಬೆಂಗಳೂರು: ನಾನು ಡಿ.ಕೆ. ರವಿ ಅವರ ಹೆಸರಿಗೆ ಕಳಂಕ ತಂದಿಲ್ಲ, ತರುವುದೂ ಇಲ್ಲ. ರಾಜಕೀಯ ರಂಗ ನನಗೆ ಹೊಸದೇನೂ ಅಲ್ಲ ಎಂದು ಆರ್. ಆರ್. ನಗರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಿಳಿಸಿದ್ದಾರೆ.

ಶಿರಾ ಹಾಗೂ ಆರ್. ಆರ್. ನಗರ ಉಪಚುನಾವಣಾ ಕಾವು ರಂಗೇರುತ್ತಿದ್ದು, ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿರುವ ಆರ್. ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ನಾನು ಡಿ.ಕೆ. ರವಿ ಅವರ ಹೆಸರಿಗೆ ಕಳಂಕ ಬರದಂತೆ ನಡೆದುಕೊಳ್ಳುತ್ತೇನೆ. ಡಿ.ಕೆ. ರವಿ ತಾಯಿ, ಅತ್ತೆ ಗೌರಮ್ಮ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಹೋಗಲ್ಲ ಅವರು ಮೊದಲಿನಿಂದಲೂ ಹಾಗೆ ಹೇಳುತ್ತಲೇ ಇದ್ದಾರೆ ಎಂದರು.

ನಾನು ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ ಅವರ ಮಗಳು. ಹೀಗಾಗಿ ಮೊದಲಿನಂದಲೂ ರಾಜಕೀಯ ನೋಡಿಕೊಂಡು ಬಂದಿದ್ದೇನೆ. ನಾನೂ ಕೂಡ ವಿದ್ಯಾವಂತೆ. ಯುವಕರು, ವಿದ್ಯಾವಂತರು ರಾಜಕೀಯಕ್ಕೆ ಬರಬೇಕು. ಜನರ ಕಷ್ಟ ಅರಿತು ಸಹಾಯ ಮಾಡಬೇಕು ಎಂಬುದು ನನ್ನ ಉದ್ದೇಶ. ಈಗ ನನಗೆ ಒಂದು ಅವಕಾಶ ಸಿಕ್ಕಿದೆ ಹೀಗಾಗಿ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...