alex Certify ‘ಅನ್ನದಾತ’ರ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಬಂಪರ್ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅನ್ನದಾತ’ರ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಬಂಪರ್ ಸುದ್ದಿ

ಅನ್ನದಾತರ ಮಕ್ಕಳಿಗೆ ರಾಜ್ಯ ಸರ್ಕಾರ ಭರ್ಜರಿ ಬಂಪರ್ ಸುದ್ದಿಯೊಂದನ್ನು ನೀಡಿದೆ. ಕೃಷಿ ವಿಶ್ವವಿದ್ಯಾಲಯದಲ್ಲಿ ರೈತರ ಮಕ್ಕಳಿಗೆ ಈಗ ನೀಡುತ್ತಿರುವ ಶೇಕಡಾ 40 ರಷ್ಟು ಸೀಟುಗಳನ್ನು ಶೇಕಡಾ 50 ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ.

ಬೀದರ್ ತಾಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿದ್ದ ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ್ದು, ಬಜೆಟ್ ನಲ್ಲಿ ಇದನ್ನು ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಕೃಷಿಕರ ಖಾತೆಗೆ 6 ಸಾವಿರ ರೂ. ಜಮಾ: ಇಲ್ಲಿದೆ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ

ಅಲ್ಲದೇ ಡಿಪ್ಲೋಮಾ ಉತ್ತೀರ್ಣರಾದ ಮೂರು ಸಾವಿರ ಮಂದಿಯನ್ನು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿ ಹತ್ತು ತಿಂಗಳ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತಿದ್ದು, ಇವರುಗಳು ಮೂರು ತಿಂಗಳ ಕಾಲ ಬೆಳೆ ಸಮೀಕ್ಷೆ ಹಾಗೂ ಇತರ ಏಳು ತಿಂಗಳ ಕಾಲ ಕೃಷಿ ಇಲಾಖೆಯ ಯೋಜನೆಗಳ ಮಾಹಿತಿಯನ್ನು ರೈತರಿಗೆ ತಲುಪಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...