alex Certify ಆಡಿಯೋ ಬಾಂಬ್ ಸಿಡಿಸಿದ ಡಿಸಿಎಂ ಅಶ್ವತ್ಥನಾರಾಯಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಡಿಯೋ ಬಾಂಬ್ ಸಿಡಿಸಿದ ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ಮೈತ್ರಿ ಸರ್ಕಾರದ ಪತನಕ್ಕೆ ಯಾರು ಕಾರಣ ಎಂಬುದರ ಬಗ್ಗೆ ಸಾಕ್ಷ್ಯವಿದೆ. ಯಾರು ಮುನಿರತ್ನ ಅವರನ್ನು ಕಾಂಗ್ರೆಸ್ ನಿಂದ ಕಳುಹಿಸಿದರು ಎಂಬುದರ ಬಗ್ಗೆ ನಮ್ಮ ಬಳಿ ಆಡಿಯೋ ಸಾಕ್ಷಿ ಇದೆ. ಎಲ್ಲವನ್ನು ಜನರಿಗೆ ತಿಳಿಸುವ ಕಾಲ ಬಂದಿದೆ.

ಶೀಘ್ರದಲ್ಲೇ ಈ ಆಡಿಯೋ ಬಿಡುಗಡೆ ಮಾಡುತ್ತೇವೆ ಎಂದು ಡಿಸಿಎಂ ಅಶ್ವತ್ಥನಾರಾಯಣ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಸಿದ್ದರಾಮಯ್ಯನವರೇ ದ್ರೋಹ ಮಾಡಿದರು. ಕಾಂಗ್ರೆಸ್ ನವರೇ ಮೈತ್ರಿ ಸರ್ಕಾರ ಬೀಳಿಸಿದರು.

ಈಗ ಮುನಿರತ್ನ, ವೋಟ್ ಗಾಗಿ ತಮ್ಮನ್ನು ಮಾರಿಕೊಂಡಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಮುನಿರತ್ನ, ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ಗೆ ಆತ್ಮೀಯರು. ಅವರು ಕಾಂಗ್ರೆಸ್ ಬಿಟ್ಟು ಬರಲು ಯಾರು ಕಾರಣ ಎಂಬುದನ್ನು ಹೇಳಬೇಕು ಎಂದರು.

ಡಿ.ಕೆ.ಶಿವಕುಮಾರ್ ತಾವು ಮೈತ್ರಿ ಸರ್ಕಾರದ ಕೈಬಿಡಲ್ಲ. ನಾವು ಜೋಡೆತ್ತುಗಳು ಎಂದು ಕುಮಾರಸ್ವಾಮಿ ಜೊತೆ ಸರ್ಕಾರ ಮಾಡಿದರು. ಬಳಿಕ ಅವರ ಜೊತೆಯೇ ಇದ್ದು ಅವರಿಗೆ ಗುಂಡಿ ತೋಡಿದರು. ನಿಜವಾದ ಮೀರ್ ಸಾದಿಕ್ ಇದ್ದರೆ ಅದು ಡಿ.ಕೆ.ಶಿವಕುಮಾರ್ ಎಂದು ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...