ಕರೋನಾ ಮಹಾಮಾರಿ ವಕ್ಕರಿಸಿಕೊಂಡಿರುವ ಪರಿಣಾಮ ಈಗಾಗಲೇ ಹಲವರು ಜೀವ ಕಳೆದುಕೊಂಡಿದ್ದು, ಸಾಕಷ್ಟು ಮಂದಿ ಸೋಂಕು ಪೀಡಿತರಾಗಿದ್ದಾರೆ. ಸೋಂಕು ಪೀಡಿತರ ಶುಶ್ರೂಷೆಯಲ್ಲಿ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ನಿರಂತರವಾಗಿ ತೊಡಗಿಕೊಂಡಿದ್ದಾರೆ.
ಹೀಗಾಗಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಿಗೆ ಬಂಪರ್ ಸುದ್ದಿಯೊಂದನ್ನು ನೀಡಿದ್ದು, ಗುತ್ತಿಗೆ ನೌಕರರ ನೌಕರಿಯನ್ನು ಕಾಯಂ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಅಲ್ಲದೆ ಕರೋನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ವಿಶೇಷ ಗಿಫ್ಟ್ ನೀಡುವುದಲ್ಲದೆ, 2000 ವೈದ್ಯ ಹುದ್ದೆಯನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುತ್ತದೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.