ಆರೋಗ್ಯ ವಿಮೆ ಹೊಂದಿದವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ದೇಶದಲ್ಲಿ ಕರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್ಡಿಎ) ಮಹತ್ವದ ಸೂಚನೆ ಹೊರಡಿಸಿದೆ.
ಆರೋಗ್ಯ ವಿಮೆ ಹೊಂದಿದವರು ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ನಗದು ರಹಿತ ಚಿಕಿತ್ಸೆ ಬಯಸಿದರೆ ಈ ಕುರಿತು 2 ಗಂಟೆಯೊಳಗಾಗಿ ನಿರ್ಧರಿಸಬೇಕು ಎಂದು ತಿಳಿಸಲಾಗಿದೆ.
ವಿಮೆದಾರರ ಮನವಿಯನ್ನು ತಿರಸ್ಕರಿಸುವ ಅಥವಾ ಪುರಸ್ಕರಿಸುವ ಕುರಿತು ಎರಡು ಗಂಟೆಯೊಳಗಾಗಿ ತೀರ್ಮಾನ ಕೈಗೊಂಡು ಅದನ್ನು ಸಂಬಂಧಪಟ್ಟವರಿಗೆ ತಿಳಿಸಬೇಕಲ್ಲದೆ ಐಆರ್ಡಿಎ ಗೂ ಈ ಕುರಿತು ಮಾಹಿತಿ ನೀಡಬೇಕೆಂದು ಸೂಚಿಸಲಾಗಿದೆ.