alex Certify ಆಲಮಟ್ಟಿ ಬಳಿ ಬಿಜೆಪಿ ಮುಖಂಡರು – ಪೊಲೀಸರ ನಡುವೆ ವಾಗ್ವಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಲಮಟ್ಟಿ ಬಳಿ ಬಿಜೆಪಿ ಮುಖಂಡರು – ಪೊಲೀಸರ ನಡುವೆ ವಾಗ್ವಾದ

ವಿಜಯಪುರ: ಜಿಲ್ಲೆಯ ಆಲಮಟ್ಟಿ ಜಲಾಶಯದ ಬಳಿ ಬಿಜೆಪಿ ಮುಖಂಡರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಪೊಲೀಸರು ಬಿಜೆಪಿ ನಾಯಕನಿಗೆ ಎಚ್ಚರಿಕೆ ನೀಡಿದ ಘಟನೆ ನಡೆದಿದೆ.

ವಿಜಯಪುರದ ನಿಡಗುಡಿ ತಾಲೂಕಿನಲ್ಲಿರುವ ಆಲಮಟ್ಟಿ ಜಲಾಶಯ ಭರ್ತಿಯಾಗಿದ್ದು, ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಬಾಗಿನ ಸಮರ್ಪಿಸಲು ಬರುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬಿಜೆಪಿ ಮುಖಂಡ ಪ್ರಶಾಂತ್ ಪವಾರ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಬ್ಯಾನರ್ ಕಟ್ಟಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಬಂದು ತಡೆದಿದ್ದಾರೆ.

ಇದರಿಂದ ಆಕ್ರೋಶಗೊಂಡ ಪ್ರಶಾಂತ್ ಪವಾರ್ ಹಾಗೂ ಇತರರು ಪೊಲೀಸರ ಜತೆ ವಾಗ್ವಾದಕ್ಕಿಳಿದಿದ್ದಾರೆ. ಈ ವೇಳೆ ಪೊಲೀಸರು ಪ್ರಶಾಂತ್ ಪವಾರ್ ಗೆ ಎಚ್ಚರಿಕೆ ನೀಡಿದ್ದು, ಬ್ಯಾನರ್ ನಿನ್ನೆ ಕಟ್ಟಬೇಕಿತ್ತು. ಇಂದು ಕಟ್ಟಲು ಯಾವುದೇ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...