ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ವೈರಸ್ ಸೋಂಕು ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗಾಗಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇವರ ಜೊತೆಗೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ ಆದ ರೀತಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ.
ಆಶಾ ಕಾರ್ಯಕರ್ತೆಯರ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರ ಈ ಮೊದಲು ಪ್ರೋತ್ಸಾಹ ಧನವನ್ನು ಘೋಷಿಸಿದ್ದು, ಇದೀಗ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಆಶಾ ಕಾರ್ಯಕರ್ತೆಯರಿಗೆ ಮತ್ತೊಂದು ಸಿಹಿಸುದ್ದಿಯನ್ನು ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿರುವ ಸಚಿವರು ರಾಜ್ಯಾದ್ಯಂತ ಆಶಾ ಕಾರ್ಯಕರ್ತರ ಸಹಕಾರ ಬ್ಯಾಂಕ್ ತೆರೆಯುವ ಕುರಿತು ಚಿಂತನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಸಹಕಾರ ಬ್ಯಾಂಕ್ ಮೂಲಕ ಆಶಾ ಕಾರ್ಯಕರ್ತೆಯರಿಗೆ ನೀಡುವ ಸಾಲವನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿಯೂ ವಿತರಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.