alex Certify ಇಂದು ಸಂಜೆ 4 ರಿಂದ 6 ಗಂಟೆಯ ಒಳಗೆ ಸಿಡಿಯಲಿದೆ ಬಾಂಬ್: ರಮೇಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಸಂಜೆ 4 ರಿಂದ 6 ಗಂಟೆಯ ಒಳಗೆ ಸಿಡಿಯಲಿದೆ ಬಾಂಬ್: ರಮೇಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ

ರಾಜ್ಯದಲ್ಲಿ ಸಿಡಿ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಮೊದಲು ರಮೇಶ್ ಜಾರಕಿಹೊಳಿ ಅವರದ್ದೆನ್ನಲಾದ ರಾಸಲೀಲೆ ವಿಡಿಯೋ ವೈರಲ್ ಆಗಿದ್ದು, ಅದಾದ ಬಳಿಕ ವಿಡಿಯೋದಲ್ಲಿದ್ದ ಯುವತಿ ತನ್ನ ಹೇಳಿಕೆಯಿರುವ ಸರಣಿ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದರು.

ಇದೀಗ ಯುವತಿ ತನ್ನ ಪರ ವಕೀಲ ಜಗದೀಶ್ ಅವರ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅತ್ಯಾಚಾರ, ವಂಚನೆ ಸೇರಿದಂತೆ ಹಲವು ಪ್ರಕರಣಗಳು ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಗಿವೆ.

‘ಬಾಂಗ್ಲಾ ವಿಮೋಚನೆ’ಯ ಪರ ಹೋರಾಟ ನಡೆಸಿ ಜೈಲಿಗೂ ಹೋಗಿದ್ದರು ಪ್ರಧಾನಿ ಮೋದಿ

ಇದರ ಬೆನ್ನಿಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ರಮೇಶ್ ಜಾರಕಿಹೊಳಿ, ಶನಿವಾರ ಸಂಜೆ 4 ರಿಂದ 6 ಗಂಟೆಯ ಒಳಗೆ ದೊಡ್ಡ ಬಾಂಬ್ ಸಿಡಿಯಲಿದೆ. ಸ್ವತಃ ನಾನೇ ಮಾತನಾಡಲಿದ್ದು, ಹಲವು ಸಂಗತಿಗಳನ್ನು ಬಿಚ್ಚಿಡಲಿದ್ದೇನೆ ಎಂದು ಹೇಳುವ ಮೂಲಕ ಕುತೂಹಲ ಕೆರಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...