alex Certify ಇವಿಎಂ ರದ್ದು ಮಾಡಿ ಬ್ಯಾಲೆಟ್ ಪೇಪರ್ ತರಲು ಸಂಸದ ಡಿ.ಕೆ. ಸುರೇಶ್ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇವಿಎಂ ರದ್ದು ಮಾಡಿ ಬ್ಯಾಲೆಟ್ ಪೇಪರ್ ತರಲು ಸಂಸದ ಡಿ.ಕೆ. ಸುರೇಶ್ ಆಗ್ರಹ

ಬೆಂಗಳೂರು: ಬಿಹಾರದಲ್ಲಿ ಇವಿಎಂ ದುರ್ಬಳಕೆ ಆರೋಪ ಕೇಳಿಬಂದಿದೆ. ಆರ್.ಆರ್.ನಗರ ಉಪಚುನಾವಣೆಯಲ್ಲಿಯೂ ಇವಿಎಂ ಹ್ಯಾಕ್ ಮಾಡಿರುವ ಸಾಧ್ಯತೆಯಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, ಇವಿಎಂ ಮಾಡಿರುವುದು ಮನುಷ್ಯರೇ ತಾನೆ. ಹಾಗಾಗಿ ಇವಿಎಂ ದುರ್ಬಳಕೆ ಮಾಡಿಕೊಳ್ಳುವ ಅವಕಾಶವಿದೆ. ಈ ಬಗ್ಗೆ ಅನುಮಾನಗಳಿವೆ. ಇಲ್ಲವಾದಲ್ಲಿ ಆರ್.ಆರ್. ನಗರದಲ್ಲಿ ಕಾಂಗ್ರೆಸ್ ಗೆ ಅಷ್ಟೊಂದು ಮತಗಳ ಅಂತರದ ಸೋಲು ಸಾಧ್ಯವಿಲ್ಲ. ಚುನಾವಣಾ ಆಯೋಗ ಮೂಕಪ್ರೇಕ್ಷನಂತಾಗಿದೆ. ಇದೇ ರೀತಿ ಮುಂದುವರಿದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ ಎಂದು ಕಿಡಿಕಾರಿದರು.

ಇವಿಎಂ ರದ್ದು ಮಾಡಿ ಬ್ಯಾಲೆಟ್ ಪೇಪರ್ ಆರಂಭಿಸಬೇಕು. ಈ ಬಗ್ಗೆ ಎಲ್ಲಾ ಪಕ್ಷಗಳು ಸುಪ್ರೀಂ ಕೋರ್ಟ್ ಗೆ ಪತ್ರ ಅಭಿಯಾನ ಮಾಡಬೇಕು ಎಂದು ಅಗ್ರಹಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...