ರಾಜ್ಯ ಸರ್ಕಾರ ಲಾಕ್ ಡೌನ್ ನಿಯಮದಲ್ಲಿ ಬಹಳಷ್ಟು ಸಡಿಲಿಕೆಗಳನ್ನು ಮಾಡಿದ್ದು, ಸರ್ಕಾರಿ ಹಾಗೂ ಖಾಸಗಿ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಅಂತರ್ ಜಿಲ್ಲಾ ಪ್ರವೇಶಕ್ಕೂ ಅವಕಾಶ ಕಲ್ಪಿಸಲಾಗಿದ್ದು, ಇದಕ್ಕೆ ಪಾಸ್ ಅಗತ್ಯವಿಲ್ಲವೆಂದು ಹೇಳಲಾಗಿದೆ.
ಅಂತರ್ ರಾಜ್ಯ ಸಂಚಾರಕ್ಕೆ ಆಯಾ ರಾಜ್ಯ ಸರ್ಕಾರಗಳ ತೀರ್ಮಾನ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರ ಹೇಳಿದ್ದು, ಆದರೆ ಸದ್ಯಕ್ಕೆ ಅಂತರ್ ರಾಜ್ಯ ಬಸ್ ಸಂಚಾರ ಆರಂಭಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಅಲ್ಲದೆ ಕೊರೊನಾ ವೈರಸ್ ವ್ಯಾಪಕವಾಗಿರುವ ಮಹಾರಾಷ್ಟ್ರ, ಗುಜರಾತ್, ಕೇರಳ ಹಾಗೂ ತಮಿಳುನಾಡಿನಿಂದ ಬರುವ ಜನರಿಗೆ ಮೇ 31ರವರೆಗೆ ರಾಜ್ಯ ಪ್ರವೇಶಿಸಲು ಅವಕಾಶವಿರುವುದಿಲ್ಲ ಎಂದು ಹೇಳಲಾಗುತ್ತಿದೆ.
ಅಲ್ಲದೇ ಹೊರ ರಾಜ್ಯ ಮತ್ತು ಹೊರ ದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ರಾಜ್ಯಕ್ಕೆ ಕರೆದುಕೊಂಡು ಬಂದಾಗ ಕಡ್ಡಾಯವಾಗಿ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತದೆ.