ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ 4ನೇ ಹಂತದ ಲಾಕ್ ಡೌನ್ ನಲ್ಲಿ ಸಡಿಲಿಕೆ ಕುರಿತ ಕೆಲವು ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ರಾಜ್ಯಗಳಿಗೆ ನೀಡಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸೋಮವಾರದಂದು ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.
ಇಂದಿನಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರ ಆರಂಭವಾಗಲಿದ್ದು ಇದರ ಜೊತೆಗೆ ಆಟೋರಿಕ್ಷಾ, ಟ್ಯಾಕ್ಸಿ ಸಂಚಾರಕ್ಕೂ ಅನುಮತಿ ನೀಡಲಾಗಿದೆ. ಪಾರ್ಕ್ ಗಳು ತೆರೆಯಲಿದ್ದು, ಕ್ರೀಡಾ ಚಟುವಟಿಕೆಗಳಿಗೂ ಅವಕಾಶ ಕಲ್ಪಿಸಲಾಗಿದೆ.
ಈ ಕೆಳಕಂಡವುಗಳನ್ನು ಹೊರತುಪಡಿಸಿ ಇಂದಿನಿಂದ ಬಹುತೇಕ ಸೇವೆಗಳು ಆರಂಭವಾಗಿದ್ದು, ಮಾಲ್, ಚಿತ್ರಮಂದಿರ, ಎಸಿ ಬಸ್ ಸೇವೆ, ಹೊರ ರಾಜ್ಯದ ರೈಲ್ವೆ ಸಂಚಾರ, ಧಾರ್ಮಿಕ ಕೇಂದ್ರಗಳ ಮೇಲಿನ ನಿರ್ಬಂಧ ಮುಂದುವರೆಯಲಿದೆ. ಜೊತೆಗೆ ಶಾಲಾ-ಕಾಲೇಜುಗಳಿಗೂ ಸಹ ಮೇ 31ರವರೆಗೆ ರಜೆ ಮುಂದುವರಿಸಲಾಗುತ್ತಿದೆ. ಹೋಟೆಲ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ನೀಡಲಾಗಿದೆ.