alex Certify ಈ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ‘ಮುಖ್ಯಮಂತ್ರಿ’ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ‘ಮುಖ್ಯಮಂತ್ರಿ’ ಯಡಿಯೂರಪ್ಪ

ಟೈಮ್ಸ್ ನೌ ಮತ್ತು ಒಆರ್ ಮ್ಯಾಕ್ಸ್ ಸಂಸ್ಥೆಗಳು ಕೊರೊನಾ ಸೋಂಕು ನಿರ್ವಹಣೆಯಲ್ಲಿ ಅತ್ಯುತ್ತಮ ಸಾಧನೆ ತೋರಿರುವ ಮುಖ್ಯಮಂತ್ರಿಗಳ ಸಮೀಕ್ಷೆ ನಡೆಸಿದ್ದು, ಇದರಲ್ಲಿ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಎರಡನೇ ಸ್ಥಾನ ಗಳಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೊದಲ ಸ್ಥಾನದಲ್ಲಿದ್ದಾರೆ.

ಈ ಸಮೀಕ್ಷೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಮೂರನೇ ಸ್ಥಾನದಲ್ಲಿದ್ದು, ನಾಲ್ಕನೇ ಸ್ಥಾನದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಇದ್ದಾರೆ. ಐದನೇ ಸ್ಥಾನದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇದ್ದರೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಶೇಕಡ 6 ಜನರಿಂದ ಮಾತ್ರ ಮೆಚ್ಚುಗೆ ಸಿಕ್ಕಿದೆ.

ಕೊರೊನಾ ಸೋಂಕು ವ್ಯಾಪಿಸದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಕೈಗೊಂಡ ಕ್ರಮ, ವೈದ್ಯಕೀಯ ವ್ಯವಸ್ಥೆಗಳ ನಿರ್ವಹಣೆ ಸೇರಿದಂತೆ ಹಲವು ಮಾನದಂಡಗಳನ್ನು ಇಟ್ಟುಕೊಂಡು ಈ ಸಮೀಕ್ಷೆಯನ್ನು ನಡೆಸಲಾಗಿದ್ದು, ಇದರಲ್ಲಿ ಬೆಂಗಳೂರು ಸೇರಿದಂತೆ ಆರು ಮಹಾನಗರಗಳ ಜನತೆ ಪಾಲ್ಗೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...