alex Certify ಉಚಿತವಾಗಿ ನೀಡಲಾಗುತ್ತೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುಷ್ ಕಷಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಚಿತವಾಗಿ ನೀಡಲಾಗುತ್ತೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುಷ್ ಕಷಾಯ

ದೇಶಕ್ಕೆ ವಕ್ಕರಿಸಿಕೊಂಡಿರುವ ಕೊರೊನಾ ಮಹಾಮಾರಿಗೆ ಸದ್ಯಕ್ಕೆ ಲಸಿಕೆ ಲಭ್ಯವಿಲ್ಲ. ಇದರ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಿದ್ದು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗುತ್ತಿದೆ.

ರೋಗ ನಿರೋಧಕ ಶಕ್ತಿ ಹೊಂದಿರುವವರಿಗೆ ಈ ಮಾರಣಾಂತಿಕ ಸೋಂಕು ತಗುಲುವುದಿಲ್ಲ ಎನ್ನಲಾಗಿದ್ದು, ಇದರ ಮಧ್ಯೆ ರಾಜ್ಯ ಆಯುಷ್ ಇಲಾಖೆ ಕೊರೊನಾ ವಿರುದ್ಧ ಹೋರಾಡಲು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಷಾಯವನ್ನು ಬಿಡುಗಡೆ ಮಾಡಿದೆ.

ಜೋಶಾಂದ ಎಂಬ ಹೆಸರಿನ ಈ ಕಷಾಯವನ್ನು ಉಚಿತವಾಗಿ ನೀಡುತ್ತಿದ್ದು, ಕ್ವಾರಂಟೈನ್ ನಲ್ಲಿ ಇರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಕಷಾಯದ ಜೊತೆಗೆ ಅರ್ಕ್ ಎ ಅಜೀಬ್ ಎಂಬ ಪದಾರ್ಥವನ್ನು ಆಯುಷ್ ಇಲಾಖೆ ಸಿದ್ಧಪಡಿಸಿದ್ದು, ಈ ದ್ರಾವಣವನ್ನು ಟಿಶ್ಯೂ ಪೇಪರ್ ಅಥವಾ ಕರ್ಚಿಪ್ ಮೇಲೆ ಹಾಕಿಕೊಂಡು ಅದರ ಸುವಾಸನೆಯನ್ನು ತೆಗೆದುಕೊಳ್ಳಬೇಕಿದೆ. ಅಲ್ಲದೆ ಈ ದ್ರಾವಣವನ್ನು ಬಿಸಿನೀರಿಗೆ ಹಾಕಿ ಅದರ ಹಬೆಯನ್ನು ತೆಗೆದುಕೊಂಡರೆ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...