ಪ್ರಸ್ತುತ ದಿನಗಳಲ್ಲಿ ಉದ್ಯೋಗ ಸಿಗುವುದು ಅಷ್ಟು ಸುಲಭವಿಲ್ಲ. ಅದರಲ್ಲೂ ಕೊರೊನಾ ವೈರಸ್ ಕಾರಣಕ್ಕಾಗಿ ಕಳೆದ ಎರಡು ತಿಂಗಳಿನಿಂದ ಲಾಕ್ಡೌನ್ ಜಾರಿಯಲ್ಲಿದ್ದ ಕಾರಣ ಉದ್ಯೋಗದಲ್ಲಿದ್ದವರೇ ಕೆಲಸ ಕಳೆದುಕೊಳ್ಳುತ್ತಿದ್ದಾರೆ.
ಇಂತಹ ಸಂದರ್ಭದಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿರುವ ಇಂಜಿನಿಯರಿಂಗ್ ಪದವೀಧರರಿಗೆ ರಾಜ್ಯ ಸರ್ಕಾರ ಭರ್ಜರಿ ಬಂಪರ್ ಸುದ್ದಿ ನೀಡಿದೆ. ಸರ್ಕಾರಿ ಶಾಲಾ ಶಿಕ್ಷಕರ ಕೊರತೆ ನೀಗಿಸುವ ಸಲುವಾಗಿ ಇಂಜಿನಿಯರಿಂಗ್ ಪದವೀಧರರಿಗೆ ಮಣೆ ಹಾಕಲು ಸರ್ಕಾರ ತೀರ್ಮಾನಿಸಿದೆ.
ಶುಕ್ರವಾರದಂದು ನಡೆದ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯ ವೇಳೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಗಣಿತ-ವಿಜ್ಞಾನ ಶಿಕ್ಷಕರ ಕೊರತೆ ನೀಗಿಸುವ ಸಲುವಾಗಿ ಬಿಎಡ್ ಮಾಡಿರುವ ಇಂಜಿನಿಯರಿಂಗ್ ಪದವೀಧರರ ನೇಮಕಕ್ಕೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.