4ನೇ ಹಂತದ ಲಾಕ್ಡೌನ್ ಸಡಿಲಿಕೆ ಬಳಿಕ ರಾಜ್ಯದಲ್ಲಿ ಬಸ್ ಸಂಚಾರ ಆರಂಭವಾಗಿದ್ದು, ಪರವೂರಿನಲ್ಲಿ ಸಿಲುಕಿದ್ದವರು ಈಗ ತಮ್ಮ ತಮ್ಮ ಊರುಗಳತ್ತ ಮುಖ ಮಾಡುತ್ತಿದ್ದಾರೆ. ಮೊದಲೆರಡು ದಿನ ಕಡಿಮೆ ಸಂಖ್ಯೆಯಲ್ಲಿ ಬಸ್ ಗಳನ್ನು ಬಿಟ್ಟಿದ್ದ ಕೆಎಸ್ಆರ್ಟಿಸಿ ಈಗ ಗುಡ್ ನ್ಯೂಸ್ ನೀಡಿದೆ.
ಹೆಚ್ಚಿನ ಬಸ್ ಗಳ ಸಂಚಾರಕ್ಕೆ ಕೆಎಸ್ಆರ್ಟಿಸಿ ಮುಂದಾಗಿದ್ದು, ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಸಾಮಾಜಿಕ ಅಂತರವನ್ನೂ ಕಾಪಾಡಬಹುದಾಗಿದೆ.
ಅಲ್ಲದೆ ಬಿಎಂಟಿಸಿ ಬಸ್ ಸಂಚಾರದ ಸಂಖ್ಯೆಯನ್ನೂ ಹೆಚ್ಚಿಸಲು ತೀರ್ಮಾನಿಸಲಾಗಿದ್ದು, ಇಂದಿನಿಂದಲೇ ರಸ್ತೆಗಿಳಿಯುವ ನಿರೀಕ್ಷೆಯಿದೆ. ಬಸ್ ಸಂಚಾರ ಆರಂಭವಾದಾಗ ಕೆಲವೊಂದು ಮಾರ್ಗಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಪ್ರಯಾಣಿಕರು ಪ್ರಯಾಣಿಸಿರುವುದು ಗಮನಕ್ಕೆ ಬಂದಿದ್ದು, ಇದರಿಂದ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸಾಧ್ಯವಾಗಿರಲಿಲ್ಲ ಹೀಗಾಗಿ ಬಿಎಂಟಿಸಿ ಈ ನಿರ್ಧಾರಕ್ಕೆ ಬಂದಿದೆ.