alex Certify ಏಕಾಏಕಿ ಆಸ್ಪತ್ರೆಗೆ ದಾಖಲಾದ ಸಿಡಿ ಯುವತಿ ತಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಕಾಏಕಿ ಆಸ್ಪತ್ರೆಗೆ ದಾಖಲಾದ ಸಿಡಿ ಯುವತಿ ತಾಯಿ

ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಕುತೂಹಲಕರ ಮಾಹಿತಿ ಲಭ್ಯವಾಗುತ್ತಿದ್ದು, ಸಿಡಿ ಯುವತಿಯ ತಾಯಿ ಇದೀಗ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿಡಿ ಯುವತಿಯ ತಾಯಿ ಮೊದಲಿನಿಂದಲೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ಇದೀಗ ದೇಹದಲ್ಲಿ ಏಕಾಏಕಿ ಸಕ್ಕರೆ ಪ್ರಮಾಣ ಹೆಚ್ಚಾಗಿದ್ದು, ಕೈಕಾಲಿನಲ್ಲಿ ಊತ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಯುವತಿ ಸಹೋದರ, ತಾಯಿಯನ್ನು ವಿಜಯಪುರ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್

ಸಿಡಿ ಯುವತಿ ಪೋಷಕರು ಸಧ್ಯ ಯುವತಿಯ ಅಜ್ಜಿ ಮನೆಯಲ್ಲಿ ವಾಸವಾಗಿದ್ದು, ನಿಡಗುಂದಿ ಠಾಣೆ ಪೊಲೀಸರು ಕುಟುಂಬಕ್ಕೆ ರಕ್ಷಣೆ ನೀಡಿದ್ದಾರೆ. ಯುವತಿಯ ತಾಯಿಗೆ ಆಸ್ಪತ್ರೆಯಲ್ಲಿ ಕೂಡ ರಕ್ಷಣೆಗೆ ಪೊಲೀಸರನ್ನು ನಿಯೋಜಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...