alex Certify ಕಾಂಗ್ರೆಸ್ ಕಾರ್ಯಕರ್ತರ ವೇಷದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಗಲಭೆಗೆ ಸಂಚು: ಶಿವಮೊಗ್ಗದಲ್ಲಿ ಡಿಕೆಶಿ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಕಾರ್ಯಕರ್ತರ ವೇಷದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಗಲಭೆಗೆ ಸಂಚು: ಶಿವಮೊಗ್ಗದಲ್ಲಿ ಡಿಕೆಶಿ ಆರೋಪ

ಶಿವಮೊಗ್ಗ: ಶಿವಮೊಗ್ಗ ಚಲೋ ರ್ಯಾಲಿಯಲ್ಲಿ ಗಲಭೆ ಸೃಷ್ಟಿಸಲು ಬಿಜೆಪಿ ಸಂಚು ರೂಪಿಸಿದೆ. ಈ ಬಗ್ಗೆ ಸ್ವತಃ ಬಿಜೆಪಿ ಕಾರ್ಯಕರ್ತರೇ ನಮಗೆ ಮಾಹಿತಿ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಶಾಸಕ ಸಂಗಮೇಶ್ ವಿರುದ್ಧದ ಕೇಸ್ ವಾಪಸ್ ಪಡೆಯಲು ಆಗ್ರಹಿಸಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೇಲಿನ ದೌರ್ಜನ್ಯ ಖಂಡಿಸಿ ಕಾಂಗ್ರೆಸ್ ನಾಯಕರು ಶಿವಮೊಗ್ಗ ಚಲೋ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಶಾಸಕರ ವಿರುದ್ಧ ಸುಳ್ಳು ಕೇಸ್ ದಾಖಲಿಸಲಾಗಿದೆ. ನಮ್ಮ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಿದ್ದಾರೆ. ಈ ಎಲ್ಲಾ ಪ್ರಕರಣಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಸಿಎಂ ತವರು ಜಿಲ್ಲೆ ಶಿವಮೊಗ್ಗದಿಂದಲೇ ಹೋರಾಟ ನಡೆಸುತ್ತಿದ್ದೇವೆ. ಈ ಮೂಲಕ ರಾಜ್ಯದ ಜನತೆಗೆ ಸಂದೇಶ ರವಾನಿಸುತ್ತಿದ್ದೇವೆ ಎಂದರು.

ಶಿವಮೊಗ್ಗವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ – ಕಾಂಗ್ರೆಸ್ ನಾಯಕರ ವಿರುದ್ಧ ಶ್ರೀರಾಮುಲು ವಾಗ್ದಾಳಿ

ಕಾಂಗ್ರೆಸ್ ಜನಾಕ್ರೋಶ ಮೆರವಣಿಗೆಯಲ್ಲಿ ಗಲಭೆ ನಡೆಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಮೆರವಣಿಗೆ ನಡೆಯುವಾಗ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಾರ್ಯಕರ್ತರ ರೀತಿ ವರ್ತಿಸಿ ಬೇರೆ ಬೇರೆ ರೀತಿ ಘೋಷಣೆ ಕೂಗಿ ಗಲಭೆ ಮಾಡಲು ಸಂಚು ರೂಪಿಸಿದೆ. ಈ ಬಗ್ಗೆ ಸ್ವತಃ ಬಿಜೆಪಿ ಕಾರ್ಯಕರ್ತರು ನನಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...