alex Certify ಕುಕ್ಕೆ ಸುಬ್ರಹ್ಮಣ್ಯ ʼಚಂಪಾಷಷ್ಠಿʼ ಮಹೋತ್ಸವ: ದೇವಾಲಯಕ್ಕೆ ಭಕ್ತರಿಗಿಲ್ಲ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಕ್ಕೆ ಸುಬ್ರಹ್ಮಣ್ಯ ʼಚಂಪಾಷಷ್ಠಿʼ ಮಹೋತ್ಸವ: ದೇವಾಲಯಕ್ಕೆ ಭಕ್ತರಿಗಿಲ್ಲ ಅವಕಾಶ

ಕುಕ್ಕೆ ಸುಬ್ರಹ್ಮಣ್ಯ ಕರ್ನಾಟಕದ ಶ್ರೀಮಂತ ದೇವರು – EESANJE / ಈ ಸಂಜೆ

ಮಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಎದುರಾಗಿದೆ. ಈ ನಡುವೆ ಪ್ರಸಿದ್ಧ ಯಾತ್ರಾಸ್ಥಳ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾಷಷ್ಠಿ ಮಹೋತ್ಸವ ನಡೆಯಲಿದ್ದು, ಡಿ.17 ರಿಂದ ಡಿ.20 ರವರೆಗೆ ಭಕ್ತಾದಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

ಚಂಪಾಷಷ್ಠಿ ಮಹೋತ್ಸವಕ್ಕೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮುಂಗಡವಾಗಿ ನೋಂದಾಯಿಸಿಕೊಂಡಿರುವ ಭಕ್ತರನ್ನು ಹೊರತುಪಡಿಸಿ ಬೇರೆ ಭಕ್ತರಿಗೆ ಅವಕಾಶವಿಲ್ಲ. ಅಂತರಾಜ್ಯ ಹಾಗೂ ಅಂತರ್ ಜಿಲ್ಲಾ ಭಕ್ತರಿಗೆ ನಿಷೇಧ ಹೇರಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಚಂಪಾಷಷ್ಠಿ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಹೋತ್ಸವ ಚೌತಿ, ಪಂಚಮಿ ಹಾಗೂ ಷಷ್ಠಿ ರಥೋತ್ಸವ ನಡೆಯಲಿದ್ದು, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಭಕ್ತರಿಗೆ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನಿಷೇಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...