ಮದ್ಯ ವ್ಯಸನಿಯೊಬ್ಬ ಕುಡಿದ ಅಮಲಿನಲ್ಲಿ ತನ್ನ ಮನೆಗೇ ಬೆಂಕಿ ಇಟ್ಟಿರುವ ವಿಚಿತ್ರ ಘಟನೆ ಬಳ್ಳಾರಿ ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಗ್ರಾಮದ ಚಿದಾನಂದ ಎಂಬಾತ ಮದ್ಯದಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಶುಕ್ರವಾರ ರಾತ್ರಿ ಕಂಠಪೂರ್ತಿ ಮದ್ಯ ಸೇವಿಸಿ ಮನೆಗೆ ಬಂದಿದ್ದಾನೆ.
ಈ ವೇಳೆ ಪತ್ನಿ ಜೊತೆ ಜಗಳವಾಡಿದ್ದು, ಬೇಸತ್ತ ಆಕೆ ಹೊರಗೆ ಹೋಗಿ ಮಲಗಿದ್ದಾಳೆ. ಇದರಿಂದ ಆಕ್ರೋಶಗೊಂಡ ಚಿದಾನಂದ ಮನೆಗೆ ಬೆಂಕಿ ಹಚ್ಚಿದ್ದು, ಇದರಿಂದಾಗಿ ಪೀಠೋಪಕರಣಗಳು, ದವಸ-ಧಾನ್ಯ, ಮೆಣಸಿನಕಾಯಿ, ಬಟ್ಟೆ ಇತ್ಯಾದಿ ವಸ್ತುಗಳು ಸುಟ್ಟಿವೆ.