alex Certify ಕುತೂಹಲಕ್ಕೆ ಕಾರಣವಾಗಿದೆ ಅಮಿತ್ ಶಾ ಆಪ್ತನ ದಿಢೀರ್ ರಾಜ್ಯ ಭೇಟಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುತೂಹಲಕ್ಕೆ ಕಾರಣವಾಗಿದೆ ಅಮಿತ್ ಶಾ ಆಪ್ತನ ದಿಢೀರ್ ರಾಜ್ಯ ಭೇಟಿ…!

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಪ್ತ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಗುರುವಾರ ಸಂಜೆ ದಿಢೀರ್ ಆಗಿ ಬೆಂಗಳೂರಿಗೆ ಆಗಮಿಸಿದ್ದು, ಅಂದು ರಾತ್ರಿಯೇ ವಾಪಾಸ್ ನವದೆಹಲಿಗೆ ತೆರಳಿದ್ದಾರೆ.

ಈ ಭೇಟಿ ಸಂದರ್ಭದಲ್ಲಿ ರಾಜ್ಯದ ಉನ್ನತ ಆರ್ಎಸ್ಎಸ್ ನಾಯಕರೊಬ್ಬರನ್ನು ಭೂಪೆಂದ್ರ ಯಾದವ್ ಭೇಟಿಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಅಚ್ಚರಿಯ ಸಂಗತಿ ಎಂದರೆ ಭೂಪೇಂದ್ರ ಯಾದವ್ ರಾಜ್ಯ ಭೇಟಿ ಕುರಿತು ಸ್ಥಳೀಯ ಬಿಜೆಪಿ ನಾಯಕರಿಗೆ ಯಾವುದೇ ಮಾಹಿತಿ ಇರಲಿಲ್ಲ.

ಕೆಲ ದಿನಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ನಡೆದ ಕೆಲವು ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರ ಭೇಟಿ ಕುರಿತು ನಾನಾ ವ್ಯಾಖ್ಯಾನಗಳು ಕೇಳಿ ಬರುತ್ತಿವೆ. ಇದರ ಮಧ್ಯೆ ಭಾನುವಾರದಂದು ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭಾಗವಹಿಸಲಿದ್ದಾರಾ ಎಂಬುದು ಕುತೂಹಲ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...