alex Certify ಕುತೂಹಲಕ್ಕೆ ಕಾರಣವಾಗಿದೆ ಬಿಜೆಪಿ ಶಾಸಕ ಉಮೇಶ್ ಕತ್ತಿ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುತೂಹಲಕ್ಕೆ ಕಾರಣವಾಗಿದೆ ಬಿಜೆಪಿ ಶಾಸಕ ಉಮೇಶ್ ಕತ್ತಿ ಹೇಳಿಕೆ

ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನಗಳು ದೆಹಲಿ ಮಟ್ಟದಲ್ಲಿ ಆರಂಭವಾಗಿದೆ ಎಂಬ ವದಂತಿ ನಡುವೆ ಮುಖ್ಯಮಂತ್ರಿಗಳು ವಿಶೇಷ ವಿಮಾನದ ಮೂಲಕ ನವದೆಹಲಿಗೆ ತೆರಳಿದ್ದಾರೆ.

ಪಕ್ಷದ ವರಿಷ್ಠರನ್ನು ಭೇಟಿಯಾಗುವ ಮೂಲಕ ತಮ್ಮ ಪದಚ್ಯುತಿಗೆ ನಡೆದಿರುವ ಪ್ರಯತ್ನಗಳಿಗೆ ಬ್ರೇಕ್ ಹಾಕುವುದು ಹಾಗೂ ಅತೃಪ್ತರನ್ನು ತಣಿಸಲು ಸಚಿವ ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯುವುದು ಯಡಿಯೂರಪ್ಪನವರ ಉದ್ದೇಶವಾಗಿದೆ ಎಂದು ಹೇಳಲಾಗಿದೆ.

ಇದರ ಮಧ್ಯೆ ಬೆಳಗಾವಿಯಲ್ಲಿ ಮಾತನಾಡಿರುವ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ, ಮುಖ್ಯಮಂತ್ರಿ ಯಡಿಯೂರಪ್ಪನವರು ಕೇವಲ ಶಿವಮೊಗ್ಗ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳ ಕುರಿತು ಗಮನ ಹರಿಸುತ್ತಿಲ್ಲ ಎಂದು ಕಿಡಿಕಾರುವ ಮೂಲಕ ಕುತೂಹಲ ಕೆರಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...