alex Certify ಕುತೂಹಲಕ್ಕೆ ಕಾರಣವಾಯ್ತು ಡಿ ಬಾಸ್ ಹಾಗೂ ಸಚಿವದ್ವಯರ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುತೂಹಲಕ್ಕೆ ಕಾರಣವಾಯ್ತು ಡಿ ಬಾಸ್ ಹಾಗೂ ಸಚಿವದ್ವಯರ ಭೇಟಿ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಹಿರಿಯ ನಟ, ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ಭೇಟಿಯಾಗಿದ್ದು ಸಹಜವಾಗಿ ಅಭಿಮಾನಿಗಳಲ್ಲಿ ಕುತೂಹಲವನ್ನು ಇಮ್ಮಡಿಗೊಳಿಸಿದೆ.

ಕೃಷಿ ಸಚಿವ ಬಿ.ಸಿ.ಪಾಟೀಲ್ ಮನೆಗೆ ತೆರಳಿರುವ ನಟ ದರ್ಶನ್, ಕೆಲ ಸಮಯ ಅವರೊಂದಿಗೆ ಕಾಲ ಕಳೆದಿದ್ದಾರೆ. ಇದೇ ವೇಳೆ ದರ್ಶನ್ ಅವರಿಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಕೂಡ ಸಾಥ್ ನೀಡಿದ್ದಾರೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಡಿ ಬಾಸ್ ಸಚಿವದ್ವಯರನ್ನು ಭೇಟಿಯಾಗಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

ಉಪಚುನಾವಣೆ ವೇಳೆ ಆರ್.ಆರ್.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಪ್ರಚಾರ ನಡೆಸಿದ್ದರು. ಈ ವೇಳೆ ಸಚಿವ ಬಿ.ಸಿ.ಪಾಟೀಲ್ ಕೂಡ ಭಾಗಿಯಾಗಿದ್ದರು. ಇದೀಗ ದರ್ಶನ್ ಬಿ.ಸಿ.ಪಾಟೀಲ್ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಿರುವುದು ಕುತೂಹಲ ಕೆರಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...