alex Certify ಕುತೂಹಲಕ್ಕೆ ಕಾರಣವಾಯ್ತು ಮಾಜಿ ಸಿಎಂಗಳ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುತೂಹಲಕ್ಕೆ ಕಾರಣವಾಯ್ತು ಮಾಜಿ ಸಿಎಂಗಳ ಭೇಟಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದ್ದು, ಉಪಚುನಾವಣೆ ಘೋಷಣೆ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನ ಕಂದಾಯ ಭವನದಲ್ಲಿ ಕುಮಾರಸ್ವಾಮಿ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕೈಗಾರಿಕಾ ಬೆಳವಣಿಗೆ ಕುರಿತು ಚರ್ಚಿಸಲು ಭೇಟಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ ಮಾಜಿ ಸಿಎಂಗಳ ಈ ಭೇಟಿ ಕುತೂಹಲವನ್ನು ಹೆಚ್ಚಿಸಿದೆ.

ಉಪಚುನಾವಣೆ ಬೆನ್ನಲ್ಲೇ ಹಾಗೂ ಬಿಜೆಪಿಯಲ್ಲಿನ ಹಲವು ಬೆಳವಣಿಗೆಗಳ ನಡುವೆ ಕುಮಾರಸ್ವಾಮಿ ಹಾಗೂ ಶೆಟ್ಟರ್ ಭೇಟಿ ಮತ್ತೆ ರಾಜಕೀಯ ಸಂಚಲನಕ್ಕೆ ಕಾರಣವಾಗುತ್ತಾ ಕಾದು ನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...