alex Certify ಕುತೂಹಲ ಮೂಡಿಸಿದ ಕಿಚ್ಚ ಸುದೀಪ್, ಇಂದ್ರಜಿತ್ ಲಂಕೇಶ್ ಸಿದ್ಧಗಂಗಾ ಮಠದ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುತೂಹಲ ಮೂಡಿಸಿದ ಕಿಚ್ಚ ಸುದೀಪ್, ಇಂದ್ರಜಿತ್ ಲಂಕೇಶ್ ಸಿದ್ಧಗಂಗಾ ಮಠದ ಭೇಟಿ

ತುಮಕೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಪೂಜೆ ಸಲ್ಲಿಸಿದರು.

ನಾಳೆ ಕಿಚ್ಚ ಸುದೀಪ್ ಅವರ 47ನೇ ವರ್ಷದ ಹುಟ್ಟುಹಬ್ಬ ಹಿನ್ನಲೆಯಲ್ಲಿ ಇಂದು ಸುದೀಪ್ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದರು. ಕಿಚ್ಚ ಸುದೀಪ್ ಅವರಿಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸಾಥ್ ನೀಡಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ನಂಟು ಆರೋಪ ಪ್ರಕರಣ ನಡೆಯುತ್ತಿರುವ ಬೆನ್ನಲ್ಲೇ ನಟ ಸುದೀಪ್, ಇಂದ್ರಜಿತ್ ಲಂಕೇಶ್ ಜತೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿರುವ ಸಂಗತಿ ವಿಶೇಷವೇನು ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುದೀಪ್, ನಾಲ್ಕು ತಿಂಗಳ ಹಿಂದೆಯೇ ಸಿದ್ದಗಂಗಾ ಮಠಕ್ಕೆ ಭೇಟಿ ನೀಡುವ ಬಗ್ಗೆ ನಾನು ಇಂದ್ರಜಿತ್ ಜತೆ ಮಾತನಾಡಿದ್ದೆ. ಅದರಂತೆ ಫ್ಯಾಂಟಮ್ ಚಿತ್ರದ ಚಿತ್ರೀಕರಣದಿಂದ ಎರಡು ದಿನ ಬಿಡುವಿತ್ತು. ಹೀಗಾಗಿ ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿರುವುದಾಗಿ ತಿಳಿಸಿದ್ದೆ. ಹೀಗಾಗಿ ಮೊದಲು ನಿಗದಿಯಾಗಿದ್ದಂತೆಯೇ ಇಂದು ಇಬ್ಬರೂ ಮಠಕ್ಕೆ ಭೇಟಿ ನೀಡಿದ್ದೇವೆ ಎಂದರು.

ಇದೇ ವೇಳೆ ಮಾತನಾಡಿದ ಇಂದ್ರಜಿತ್, ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಧಾರ್ಮಿಕ ಹಾಗೂ ಆಧ್ಯಾತ್ಮಕ ಮನೋಭಾವದಿಂದ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀಗಳ ಸನ್ನಿದಿಗೆ ಪಾತ್ರರಾಗಿದ್ದೇವೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...